Webdunia - Bharat's app for daily news and videos

Install App

ನಾಯಿಗೆ ಬೈದಿದಕ್ಕೆ ವಿದ್ಯಾರ್ಥಿಯ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನ

Webdunia
ಮಂಗಳವಾರ, 16 ಅಕ್ಟೋಬರ್ 2018 (06:58 IST)
ಲಕ್ನೋ : ನಾಯಿಗೆ ಹೊಡೆದ ಎಂಬ ಕ್ಷುಲಕ ಕಾರಣಕ್ಕಾಗಿ ವಿದ್ಯಾರ್ಥಿಯೊಬ್ಬನ ಮೇಲೆ ಗುಂಡು ಹಾರಿಸಿ ಜೀವವನ್ನೇ ತೆಗೆಯಲು ಯತ್ನಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.


ಸಚಿನ್ ಕಶ್ಯಪ್ (17) ಗುಂಡಿನ ದಾಳಿಗೆ ಒಳಗಾದ ವಿದ್ಯಾರ್ಥಿಯಾಗಿದ್ದು, ಗುಂಡೇಟು ತಿಂದು ಸಾವುಬದುಕಿನ ಮಧ್ಯ ಹೋರಾಟ ಮಾಡುತ್ತಿರುವ ಈತನನ್ನು ಮೀರತ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತನ ಸ್ಥಿತಿ ಗಂಭೀರವಾಗಿದೆ ಎಂಬುದಾಗಿ ತಿಳಿದುಬಂದಿದೆ.


ಸಚಿನ್ ಶನಿವಾರದಂದು ಕಾಲೇಜಿನಿಂದ ಮನೆಗೆ ಬೈಕಿನಲ್ಲಿ ಬರುವಾಗ ನಾಯಿಯೊಂದು ಆತನನ್ನು ಹಿಂಬಾಲಿಸಿ ಬೊಗಳಿದಕ್ಕೆ ಆತ ಬೈಕ್ ನಿಲ್ಲಿಸಿ ನಾಯಿಗೆ ಹೊಡೆದಿದ್ದಾನೆ. ಈ ವಿಚಾರಕ್ಕೆ ಮೂವರು ಆತನ ಜೊತೆ ಜಗಳ ಮಾಡಿದ್ದಾರೆ. ನಂತರ ಜಗಳ ವಿಕೋಪಕ್ಕೆ ತಿರುಗಿ ಅದರಲ್ಲಿ ಒಬ್ಬ ಸಚಿನ್ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments