ಪಕ್ಷದ ಚಿಹ್ನೆಗಾಗಿ ಲಂಚದ ಆರೋಪ ತಳ್ಳಿಹಾಕಿದ ಟಿಟಿವಿ ದಿನಕರನ್

Webdunia
ಸೋಮವಾರ, 17 ಏಪ್ರಿಲ್ 2017 (12:42 IST)
ಅಣ್ಣಾಡಿಎಂಕೆ ಎರಡು ಎಲೆಯ ಚಿಹ್ನೆಯನ್ನ ಪಡೆಯಲು ಮಧ್ಯವರ್ತಿ ಮೂಲಕ ಲಂಚದ ಆಮಿಷವೊಡ್ಡಿದ್ದಾರೆಂಬ ಆರೋಪವನ್ನ ಅಣ್ಣಾಡಿಎಂಕೆ ಅಮ್ಮ ಪಕ್ಷದ ಮುಖಂಡ ಟಿಟಿವಿ ದಿನಕರನ್ ತಳ್ಳಿ ಹಾಕಿದ್ದಾರೆ. ದೆಹಲಿ ಪೊಲೀಸರು ಬಂಧಿಸಿರುವ ವ್ಯಕ್ತಿ ನನಗೆ ಗೊತ್ತೇ ಇಲ್ಲ, ನಾನು ಅವನನ್ನ ಒಮ್ಮೆಯೂ ಸಂಪರ್ಕಿಸಿಲ್ಲ. ನಮಗೆ ಅದರ ಅಗತ್ಯವೂ ಇಲ್ಲ ಎಂದು ರಾಷ್ಟ್ರಿಯ ಸುದ್ದಿವಾಹಿನಿಗೆ ದಿನಕರನ್ ಪ್ರತಿಕ್ರಿಯಿಸಿದ್ದಾರೆ.
 

`ನಾನು ಆ ವ್ಯಕ್ತಿಯನ್ನ ಭೇಟಿ ಮಾಡಿಲ್ಲ. ಟಿವಿಗಳಲ್ಲಿ ಮಾತ್ರ ಆತನ ಮುಖ ನೋಡುತ್ತಿದ್ಧೇನೆ. ನನಗೆ ಯಾವುದೇ ಸಮನ್ಸ್ ಬಂದಿಲ್ಲ. ಎಫ್`ಐಆರ್ ಬಗ್ಗೆಯೂ ಮಾಹಿತಿ ಇಲ್ಲ. ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ.

ಮಧ್ಯವರ್ತಿ ಸುಖೇಶ್ ಚಂದ್ರಸೇಖರ್ ಯಾರೆಂಬುದೇ ನನಗೆ ಗೊತ್ತಿಲ್ಲ. ನಮ್ಮನ್ನ ರಾಜಕೀಯವಾಗಿ ಮುಗಿಸಲು ಇಂತಹ ಸುದ್ದಿ ಹರಡಲಾಗುತ್ತಿದೆ. ಸುಖೇಶ್ ನನ್ನ ಬಗ್ಗೆ ಮಾತನಾಡಿದ್ದಾನೆಂಬುದು ಖಂಡಿತಾ ಸುಳ್ಳು, ಯಾರು ಇದನ್ನ ಮಾಡುತ್ತಿದ್ದಾರೆ. ಯಾಕೆ ಮಾಡುತ್ತಿದ್ದಾರೋ ನನಗೆ ಗೊತ್ತಿಲ್ಲವೆಂದು ದಿನಕರನ್ ಹೇಳಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments