Webdunia - Bharat's app for daily news and videos

Install App

ಕೋಲ್ಕತ್ತಾ ವೈದ್ಯೆ ಹತ್ಯೆಗೆ ಟ್ವಿಸ್ಟ್: ಸಂತ್ರಸ್ತೆಯ ಪೋಷಕರಿಂದ ಶಾಕಿಂಗ್ ಹೇಳಿಕೆ

Krishnaveni K
ಗುರುವಾರ, 5 ಸೆಪ್ಟಂಬರ್ 2024 (10:00 IST)
ಕೋಲ್ಕತ್ತಾ: ಆರ್ ಜಿ ಕರ್ ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಮೇಲೆ ನಡೆದ ರೇಪ್ ಆಂಡ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರು ಈಗ ಶಾಕಿಂಗ್ ಹೇಳಿಕೆ ನೀಡಿದ್ದು ಪೊಲೀಸರ ಮೇಲೆಯೇ ಅನುಮಾನ ಪಡುವಂತಾಗಿದೆ.

ಕೋಲ್ಕತ್ತಾ ರೇಪ್ ಆಂಡ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ರಾಯ್ ಎಂಬಾತನನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗುತ್ತಿದೆ. ಸಿಸಿಟಿವಿ ದೃಶ್ಯದಲ್ಲಿ ಈತ ಘಟನೆ ಸಂದರ್ಭದಲ್ಲಿ ಸೆಮಿನಾರ್ ಹಾಲ್ ನೊಳಗೆ ಹೋಗುವುದು ಮತ್ತು ಬರುವುದು ಅಲ್ಲದೆ, ಆತನ ಬ್ಲೂ ಟೂತ್ ಸೆಟ್ ಕೂಡಾ ಮೃತದೇಹದ ಪಕ್ಕ ಸಿಕ್ಕಿತ್ತು. ಈ ಕಾರಣಕ್ಕೆ ಆತನೇ ಆರೋಪಿ ಎಂದು ತನಿಖೆಗೊಳಪಡಿಸಲಾಗುತ್ತಿದೆ.

ಆದರೆ ಆತ ಮೊದಲಿನಿಂದಲೂ ನಾನು ಆರೋಪಿಯಲ್ಲ. ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎನ್ನುತ್ತಿದ್ದಾನೆ. ಆದರೆ ಸಾಕ್ಷ್ಯಗಳು ಆತನಿಗೆ ವಿರುದ್ಧವಾಗಿದೆ. ಇದರ ನಡುವೆ ಸಂತ್ರಸ್ತೆಯ ಪೋಷಕರು ಪೊಲೀಸರ ಮೇಲೆಯೇ ಗಂಭೀರ ಆರೋಪ ಮಾಡಿದ್ದಾರೆ.  ಮೊದಲು ತನಿಖೆ ನಡೆಸುತ್ತಿದ್ದ ಕೋಲ್ಕತ್ತಾ ಪೊಲೀಸರು ನಮಗೆ ಹಣ ನೀಡಲು ಪ್ರಯತ್ನಿಸಿದ್ದರು ಎಂದಿದ್ದಾರೆ.

ನಮಗೆ ಮಗಳ ಮೃತದೇಹವನ್ನು ನೋಡಲು ಕೆಲವು ಸಮಯ ಕಾಯಿಸಲಾಯಿತು. ಬಳಿಕ ಅವಕಾಶ ಸಿಕ್ಕಿತು. ನಮಗೆ ಮೃತದೇಹ ನೀಡಿದ ಬಳಿಕ ಕೋಲ್ಕತ್ತಾದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹಣದ ಆಮಿಷವೊಡ್ಡಿದರು. ಆದರೆ ತಕ್ಷಣವೇ ನಾವು ಅದನ್ನು ನಿರಾಕರಿಸಿದೆವು ಎಂದು ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಅವರ ಈ ಆರೋಪದಿಂದಾಗಿ ಈ ಪ್ರಕರಣದಲ್ಲಿ ಪ್ರಭಾವಿಗಳ ಕೈವಾಡವಿರಬಹುದೇ ಎಂದು ಸಂಶಯ ಹೆಚ್ಚುವಂತೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments