ದಕ್ಷಿಣ ಸುಡಾನ್`ನಲ್ಲಿ ಅಪಹರಣಗೊಂಡಿದ್ದ ಇಬ್ಬರು ಭಾರತೀಯರ ಬಿಡುಗಡೆ

Webdunia
ಶುಕ್ರವಾರ, 31 ಮಾರ್ಚ್ 2017 (13:36 IST)
ಸುಡಾನ್ ಬಂಡುಕೋರರಿಂದ ಅಪಹರಣಕ್ಕೊಳಗಾಗಿದ್ದ ಇಬ್ಬರು ಭಾರತೀಯ ಇಂಜಿನಿಯರ್`ಗಳನ್ನ ಬಿಡುಗಡೆಗೊಳಿಸಲಾಗಿದೆ. ಭಾರತ ಸರ್ಕಾರದ ಮಧ್ಯಪ್ರವೇಶದ ಬಳಿಕ ಭಾರತೀಯರನ್ನ ಬಿಡುಗಡೆಗೊಳಿಸಲಾಗಿದೆ.
 

ದಕ್ಷಿಣ ಸುಡಾನ್`ನ ದಾರ್ ಪೆಟ್ರೋಲಿಯಂ ಕಂಪನಿಯ ಆಪರೇಟರ್ ಅಜಯ್ ರಾಜಾ ಗುರುವಾರ ರಾತ್ರಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಭಾರತೀಯರ ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ ವಿದೇಶ಻ಂಗ ಸಚಿವೆ ಸುಷ್ಮಾ ಸ್ವರಾಜ್`ಗೆ ಅಭಿನಂದನೆ ಸಲ್ಲಿಸಿದ್ದಾರೆ. ಮಾರ್ಚ್ ತಿಂಗಳ ಆರಂಭದಲ್ಲಿ ಬಂಡುಕೋರರು ಭಾರತೀಯ ಇಂಜಿನಿಯರ್`ಗಳಾದ ಮಿಥುನ್ ಮತ್ತು ಎಡ್ವರ್ಡ್ ಅವರನ್ನ ಅಪಹರಿಸಿದ್ದರು.

ಈ ಬಗ್ಗೆ ಟ್ವಿಟ್ಟರ್`ನಲ್ಲಿ ಪ್ರತಿಕ್ರಿಯಿಸಿರುವ ಸುಷ್ಮಾ ಸ್ವರಾಜ್, ಭಾರತದ ಪ್ರಜೆಗಳಾದ ಮಿಥುನ್ ಮತ್ತು ಎಡ್ವರ್ಡ್ ಬಿಡುಗಡೆಯ ಸುದ್ದಿ ತಿಳಿಸಲು ನನಗೆ ಸಂತಸವಾಗುತ್ತಿದೆ. ಬಿಡುಗಡೆಯಲ್ಲಿ ಪ್ರಮುಖ ಪಾತ್ರ ವಹಿಸಿದ ದಕ್ಷಿಣ ಸುಡಾನ್`ನ ಭಾರತದ ರಾಯಭಾರಿ ಶ್ರೀಕುಮಾರ್ ಮೆನನ್ ಅವರಿಗೆ ಸುಷ್ಮಾ ಅಭಿನಂದನೆ ಸಲ್ಲಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments