Webdunia - Bharat's app for daily news and videos

Install App

ಇಬ್ಬರು ಅಪ್ರಾಪ್ತರನ್ನು ಹತ್ಯೆಗೈದು ರಕ್ತ ಕುಡಿದ ಅನ್ಯಕೋಮಿನ ಯುವಕರು

Krishnaveni K
ಬುಧವಾರ, 20 ಮಾರ್ಚ್ 2024 (11:24 IST)
ಲಕ್ನೋ: ಇಬ್ಬರು ಅಪ್ರಾಪ್ತರನ್ನು ಕೊಂದ ನೆರೆಮನೆಯ ಯುವಕರು ಅವರ ರಕ್ತ ಕುಡಿದು ವಿಕೃತಿ ಮೆರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆ ಸಂಬಂಧ ಆರೋಪಿಗಳಲ್ಲಿ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ ಇನ್ನೊಬ್ಬನನ್ನು ಬಂಧಿಸಲಾಗಿದೆ.

12 ಮತ್ತು 6 ವರ್ಷದ ಪುಟಾಣಿ ಬಾಲಕರನ್ನು ತಮ್ಮ ಮನೆಯ ಟೆರೇಸ್ ನಲ್ಲಿ ಆರೋಪಿಗಳು ಕತ್ತು ಸೀಳಿ ಹತ್ಯೆ ಮಾಡಿದ್ದಲ್ಲದೆ, ಅವರ ರಕ್ತ ಕುಡಿದು ವಿಕೃತಿ ಮೆರೆದಿದ್ದಾರೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೇ ಆಕ್ರೋಶಗೊಂಡ ಸಾರ್ವಜನಿಕರು ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ.

ಆರೋಪಿ ಮೊಹಮ್ಮದ್ ಸಾಜಿದ್ ಬಾರ್ಬರ್ ಶಾಪ್ ಇಟ್ಟುಕೊಂಡಿದ್ದ. ಕೊಲೆಗೀಡಾದ ಮಕ್ಕಳ ನೆರೆಮನೆಯಲ್ಲೇ ವಾಸವಿದ್ದ. ಕೊಲೆಗೀಡಾದ 12 ಮತ್ತು 6 ವರ್ಷದ ಮಕ್ಕಳ ಜೊತೆಗೆ 8 ವರ್ಷದ ಮತ್ತೊಬ್ಬ ಸಹೋದರನನ್ನೂ ಆರೋಪಿ ಸಾಜಿದ್ ಕೊಲೆ ಮಾಡಲು ಯತ್ನಿಸಿದ್ದ. ಆದರೆ ಆತ ಗಾಯಗಳಾಗಿದ್ದರೂ ತಪ್ಪಿಸಿಕೊಂಡಿದ್ದ. ಉಳಿದಿಬ್ಬರು ಸಹೋದರರು ಸಾಜಿದ್ ಕೈಯಲ್ಲಿ ಕ್ರೂರವಾಗಿ ಕೊಲೆಗೀಡಾದರು. ಬಳಿಕ ಇನ್ನೊಬ್ಬ ಆರೋಪಿ ಜೊತೆಗೂಡಿ ಆತ ಕೊಲೆಗೀಡಾದ ಮಕ್ಕಳ ರಕ್ತ ಕುಡಿದು ರಾಕ್ಷಸನಂತೆ ವರ್ತಿಸಿದ್ದ.

ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೇ ರೊಚ್ಚಿಗೆದ್ದ ಜನ ಗಲಾಟೆ ಆರಂಭಿಸಿದ್ದರು. ಈ ವೇಳೆ ಪೊಲೀಸರು ಇಬ್ಬರು ಆರೋಪಿಗಳ ಸೆರೆಗೆ ಪ್ರಯತ್ನಿಸಿದ್ದು, ಈ ವೇಳೆ ಓರ್ವ ಪೊಲೀಸರ ಮೇಲೆಯೇ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಆದರೆ ಪೊಲೀಸರು ಪ್ರತಿದಾಳಿ ಮಾಡಿ ಆತನನ್ನು ಎನ್ ಕೌಂಟರ್ ಮಾಡಿದ್ದಾರೆ. ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಹೇಯ ಕೃತ್ಯಕ್ಕೆ ಇಡೀ ಉತ್ತರ ಪ್ರದೇಶವೇ ಆಕ್ರೋಶಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಭಾರೀ ಮಳೆ ಸೂಚನೆ, ಉಳಿದೆಡೆ ಹೇಗಿದೆ ಮಳೆ

Firing Case: ನ್ಯಾಯ ಸಿಗದಿದ್ದಲ್ಲಿ ಸುಮ್ಮನೇ ಕೂರವವರೇ ಅಲ್ಲ, ರಿಕ್ಕಿ ರೈ

ಗೌರವ ಡಾಕ್ಟರೇಟ್‌ ನಿರಾಕರಿಸಿದ ಸಚಿವ ಸತೀಶ್ ಜಾರಕಿಹೊಳಿ, ಕಾರಣ ಬಿಚ್ಚಿಟ್ಟಿದ್ದು ಹೀಗೇ

ಕಪ್ ಗೆದ್ದು ಅಭಿಮಾನಿಗಳ ಕಾಯುವಿಕೆ ಅಂತ್ಯ ಮಾಡಿ, RCBಗೆ ಶುಭ ಹಾರೈಸಿದ ಸಿದ್ದರಾಮಯ್ಯ

ವಾಕ್ ಸ್ವಾತಂತ್ರ್ಯವಿದೆ, ನೋವಿಸುವಷ್ಟರ ಮಟ್ಟಿಗಲ್ಲ: ಶರ್ಮಿಷ್ಟಾ ಪನೋಲಿಗೆ ಜಾಮೀನು ನೀಡಲು ಕೋರ್ಟ್‌ ನಿರಾಕರಣೆ

ಮುಂದಿನ ಸುದ್ದಿ
Show comments