Webdunia - Bharat's app for daily news and videos

Install App

ಸೆಲ್ಫಿ ಕ್ಲಿಕ್ಕಿಸುವಾಗ ರೈಲು ಹರಿದು ಹೈಸ್ಕೂಲ್ ವಿದ್ಯಾರ್ಥಿಗಳ ದುರ್ಮರಣ

Webdunia
ಮಂಗಳವಾರ, 17 ಜನವರಿ 2017 (11:31 IST)
ಸೆಲ್ಫಿಗೆ ಮತ್ತೆರಡು ಜೀವಗಳು ಬಲಿಯಾಗಿವೆ. ದೆಹಲಿಯ ಅಕ್ಷರಧಾಮ ದೇವಸ್ಥಾನದ ಬಳಿ ಈ ಹೃದಯವಿದ್ರಾವಕ ಘಟನೆ ನಡೆದಿದ್ದು ಮೃತರು ಹೈಸ್ಕೂಲ್ ವಿದ್ಯಾರ್ಥಿಗಳಾಗಿದ್ದಾರೆ.  
ದುರ್ಮರಣವನ್ನಪ್ಪಿದವರನ್ನು 10ನೇ ತರಗತಿ ವಿದ್ಯಾರ್ಥಿಗಳಾದ ಯಶ್ ಕುಮಾರ್ ಮತ್ತು 9 ನೇ ತರಗತಿ ವಿದ್ಯಾರ್ಥಿ ಶುಭಮ್ ಎಂದು ಗುರುತಿಸಲಾಗಿದ್ದು ಸ್ನೇಹಿತರಿಬ್ಬರು ಮಯೂರ್ ವಿಹಾರ್‌ನಲ್ಲಿರುವ ಆಸ್ಟರ್ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದರು. 
 
ತಮ್ಮ ಐವರು ಸ್ನೇಹಿತರೊಂದಿಗೆ ರೈಲನ್ನೇರಿದ್ದ ಬಾಲಕರು 1,300 ರೂಪಾಯಿಗೆ ಡಿಎಸ್‌ಎಲ್ಆರ್ ಕ್ಯಾಮರಾವನ್ನು ಬಾಡಿಗೆಗೆ ಪಡೆದು ಅಕ್ಷರಧಾಮ ದೇವಸ್ಥಾನದ ಹಿಂದುಗಡೆಗಿದ್ದ ರೈಲಿನ ಹಳಿಯ ಮೇಲೆ ನಿಂತು ಚಲಿಸುತ್ತಿದ್ದ ರೈಲಿನ ಮುಂದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿದ್ದರು. ಆ ಸಮಯದಲ್ಲಿ ವೇಗವಾಗಿ ಬಂದ ರೈಲೊಂದು ಬಾಲಕರ ಮೇಲೆ ಹರಿದು ಹೋಗಿದೆ.
 
ಶವಗಳನ್ನು ಮರಣೋತ್ತರ ಪರೀಕ್ಷೆ ಒಳಪಡಿಸಲಾಗಿದ್ದು, ಕ್ಯಾಮರಾವನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments