Webdunia - Bharat's app for daily news and videos

Install App

ಪ್ರೀತಿ ನಿರಾಕರಣೆ: ಭಗ್ನಪ್ರೇಮಿಗಳು ಮಾಡಿದ್ದೇನು ಗೊತ್ತಾ?

Webdunia
ಬುಧವಾರ, 29 ಜೂನ್ 2016 (12:06 IST)
ಅವರಿಬ್ಬರು ಆಕೆಯನ್ನು ಪ್ರೀತಿಸಿದಳು. ಆದರಾಕೆ ಅವರ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಈ ಕಾರಣಕ್ಕೆ ಸಿಟ್ಟಿಗೆದ್ದ ಇಬ್ಬರು ಸೇರಿಕೊಂಡು ಏನು ಮಾಡಿದರು ಗೊತ್ತೇ? ತಿಳಿಯಲು ಮುಂದೆ ಓದಿ.

ತಮ್ಮ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಭಗ್ನಪ್ರೇಮಿಗಳಿಬ್ಬರು ಸೇರಿ ಅಮಾಯಕ ಯುವತಿಯನ್ನು ಕೊಲೆಗೈಯ್ಯಲೆತ್ನಿಸಿದ ಘಟನೆ ತಿರುಪತಿಯಲ್ಲಿ ನಡೆದಿದೆ. 
 
ತಿರುಪತಿ ನಿವಾಸಿ ಚಂದ್ರಿಕಾಳನ್ನು ನವೀನ್ ಕುಮಾರ್ ಎಂಬ ಯುವಕ ಪ್ರೀತಿಸು ಎಂದು ಕಾಡುತ್ತಿದ್ದ. ಆತನ ಸ್ನೇಹಿತ ಯಶವಂತ ಸಹ ಆಕೆಯ ಮುಂದೆ ಪ್ರೇಮ ನಿವೇದನೆ ಮಾಡಿಕೊಂಡಿದ್ದ. ಆದರೆ ಚಂದ್ರಿಕಾ ಅವರನ್ನು ಕ್ಯಾರೇ ಎನ್ನುತ್ತಿರಲಿಲ್ಲ. ಹೀಗಾಗಿ ಸಿಟ್ಟಿಗೆದ್ದ ಅವರಿಬ್ಬರು ಆಕೆಯನ್ನು ಕೊಲ್ಲುವ ಸಂಚು ರೂಪಿಸಿದ್ದಾರೆ. ಜೂನ್ 1 ರಂದು ತನ್ನ ಸ್ನೇಹಿತರ ಜತೆಯಲ್ಲಿ ಸ್ಕೂಟಿಯಲ್ಲಿ ಬರುತ್ತಿದ್ದಾಗ ಮದ್ಯದ ಅಮಲಿನಲ್ಲಿದ್ದ ಅವರಿಬ್ಬರು ಬೈಕ್‌ಲ್ಲಿ ಬಂದು ಜೋರಾಗಿ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಘಟನೆ ನಡೆದು ಒಂದು ತಿಂಗಳಾದರೂ ಆಕೆ ಇನ್ನೂ ಚೇತರಿಸಿಕೊಂಡಿಲ್ಲ. ಆಕೆಯ ಬೆನ್ನುಮೂಳೆಗೆ ಗಾಯವಾಗಿದ್ದು 6 ತಿಂಗಳುಗಳ ಕಾಲ ಆಕೆ ಹಾಸಿಗೆಯಲ್ಲೇ ಇರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಜೂನ್ 28 ರಂದು ಎನ್ಐಎಫ್‌ಟಿ ಬೆಂಗಳೂರಿನಲ್ಲಿ ತನ್ನ ಪದವಿ ಶಿಕ್ಷಣವನ್ನು ಪ್ರಾರಂಭಿಸಬೇಕಾಗಿದ್ದ ಆಕೆ ಈಗ ಎದ್ದು ನಡೆಯಲಾಗದ ಸ್ಥಿತಿಗೆ ತಲುಪಿದ್ದಾಳೆ. 
 
ಮೊದಲು ಇದೊಂದು ಅಪಘಾತ ಎಂದು ಭಾವಿಸಲಾಗಿತ್ತು. ಆದರೆ ವಿಚಾರಣೆ ಬಳಿಕ ಸತ್ಯ ಬಯಲಾಗಿದ್ದು ಆರೋಪಿಗಳಿಬ್ಬರನ್ನು ಬಂಧಿಸಿರುವ ಪೊಲೀಸರು ಅವರಿಬ್ಬರ ವಿರುದ್ಧ ನಿರ್ಭಯಾ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಿದ್ದಾರೆ. 
 
ಕಡಪಾ ಜಿಲ್ಲೆಯ ನವೀನ್ ತಾನಾಗಿಯೇ ಪೊಲೀಸರಿಗೆ ಶರಣಾದರೆ, ಯಶವಂತನನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments