Webdunia - Bharat's app for daily news and videos

Install App

ಮಹಾರಾಷ್ಟ್ರ ಸರಕಾರ ಪತನಕ್ಕೆ ಕ್ಷಣಗಣನೆ: ಸುಳಿವು ನೀಡಿದ ಶಿವಸೇನೆ ಸಚಿವ!

Webdunia
ಬುಧವಾರ, 22 ಜೂನ್ 2022 (14:40 IST)

ಅಪರೇಷನ್‌ ಕಮಲದಿಂದ ಬಂಡಾಯ ಘೋಷಿಸಿರುವ ಶಾಸಕರನ್ನು ಓಲೈಸಲು ವಿಫಲವಾಗಿರುವ ಶಿವಸೇನೆ ಮಹಾರಾಷ್ಟ್ರ ವಿಧಾನಸಭೆಯನ್ನು ವಿಸರ್ಜಿಸುವ ಸಾಧ್ಯತೆ ಇದೆ.

ವಿಧಾನಷರಿಷತ್‌ ನಲ್ಲಿ ಬಿಜೆಪಿ ಪರ ಅಡ್ಡಮತದಾನ ಮಾಡಿದ ಶಿವಸೇನೆಯ ಶಾಸಕರು ಗುಜರಾತ್‌ ನ ಹೋಟೆಲ್‌ ನಲ್ಲಿ ತಲೆಮರೆಸಿಕೊಂಡಿದ್ದಾರೆ. ಆದರೆ ಶಿವಸೇನೆ ಶಾಸಕರು ಹಾಗೂ ಸಚಿವರ ಒಂದು ತಂಡ ಬಂಡಾಯ ಶಾಸಕರನ್ನು ಭೇಟಿ ಮಾಡಿ ಮಾತುಕತೆ ಮಾಡಿ ರಾಜೀ ಸಂಧಾನ ಮಾಡಲು ಯತ್ನಿಸಿದ್ದು, ವಿಫಲವಾಗಿದೆ ಎನ್ನಲಾಗಿದೆ.

ಬಂಡಾಯ ಘೋಷಿಸಿರುವ ಏಕಾಂತ್‌ ಶಿಂಧೆ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುತ್ತಿದ್ದಂತೆ ತಮಗೆ 46 ಮತ್ತು 6 ಪಕ್ಷೇತರ ಶಾಸಕರ ಬೆಂಬಲವಿದೆ ಎಂದು ಅವರು ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಸಚಿವ ಸಂಜಯ್‌ ರಾವತ್‌ ವಿಧಾನಸಭೆ ವಿಸರ್ಜನೆಯ ಸುಳಿವು ನೀಡಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿರುವುದರಿಂದ ಅವರು ಅಖಾಡದಿಂದ ಹಿಂದೆ ಸರಿದಿದ್ದಾರೆ. ಅಲ್ಲದೇ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆಗೆ ಹೋಗುವುದಾಗಿ ಶಿವಸೇನೆ ಸುಳಿವು ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments