Select Your Language

Notifications

webdunia
webdunia
webdunia
webdunia

ಜೆಎನ್‌ಯು ವಿವಾದ: ಶರಣಾದ ಉಮರ್ ಖಾಲಿದ್, ಅನಿರ್ಬನ್

ಜೆಎನ್‌ಯು ವಿವಾದ: ಶರಣಾದ ಉಮರ್ ಖಾಲಿದ್, ಅನಿರ್ಬನ್
ನವದೆಹಲಿ , ಬುಧವಾರ, 24 ಫೆಬ್ರವರಿ 2016 (10:34 IST)
ದೇಶದ್ರೋಹದ ಘೋಷಣೆಗಳನ್ನು ಕೂಗಿದ ಆರೋಪವನ್ನು ಎದುರಿಸುತ್ತಿರುವ ಜವಾಹರ ಲಾಲ್‌ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾದ ಉಮರ್‌ ಖಾಲಿದ್‌ ಮತ್ತು ಅನಿರ್ಬನ್‌ ಭಟ್ಟಾಚಾರ್ಯ ಮಂಗಳವಾರ ತಡ ರಾತ್ರಿ ಪೊಲೀಸರಿಗೆ ಶರಣಾಗಿದ್ದಾರೆ. 
 
ಕಳೆದ ಹಲವಾರು ದಿನಗಳಿಂದ ತಲೆಮರೆಸಿಕೊಂಡಿದ್ದ ವಿದ್ಯಾರ್ಥಿಗಳು ಭಾನುವಾರ ರಾತ್ರಿ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರತ್ಯಕ್ಷರಾಗಿದ್ದರು. ಐವರು ಆರೋಪಿಗಳಿಗೆ ಪೊಲೀಸರಿಗೆ ಶರಣಾಗುವಂತೆ ಆದೇಶಿಸಿದ್ದ ದೆಹಲಿ ಹೈಕೋರ್ಟ್‌ ಶರಣಾಗುವ ಸಂದರ್ಭದಲ್ಲಿ ಭದ್ರತೆ ಒದಗಿಸಬೇಕು ಎಂದು ಪೊಲೀಸರಿಗೆ ಸೂಚಿಸಿತ್ತು.
 
ಇತರ ಆರೋಪಿಗಳಾದ ರಾಮಾ ನಾಗಾ, ಆಶುತೋಷ್ ಕುಮಾರ್, ಅನಂತ್ ಪ್ರಕಾಶ್ ಇಂದು ಪೊಲೀಸರಿಗೆ ಶರಣಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. 
 
ಜೆಎನ್‌ಯುಎಸ್‌ಯು ಅಧ್ಯಕ್ಷ ಕನ್ಹೈಯ್ಯಾ ಕುಮಾರ್ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಇಂದು ಕೈಗೆತ್ತಿಕೊಳ್ಳಲಿದೆ.
 

Share this Story:

Follow Webdunia kannada