Webdunia - Bharat's app for daily news and videos

Install App

ಬಡತನ: ಸಾಕಲಾಗದೆಂದು ಮಗನನ್ನೇ ಸಾಯಿಸಿದಳು

Webdunia
ಬುಧವಾರ, 29 ಜೂನ್ 2016 (11:44 IST)
ಬಡತನದಲ್ಲಿ ಬೇಯುತ್ತಿದ್ದ ತಾಯಿಯೋರ್ವಳು ಸಾಕಲಾಗೆಂದು ತನ್ನ ಮಗನನ್ನೇ ಸಾಯಿಸಿದ ಹೃದಯವಿದ್ರಾವಕ ಘಟನೆ ಮುಂಬೈನಲ್ಲಿ ನಡೆದಿದೆ. 

ತನ್ನ ಪತಿಯ ಸಾವಿನ ಬಳಿಕ ಆರ್ಥಿಕ ಸಮಸ್ಯೆಯಿಂದ ಬಲುತ್ತಿದ್ದ 25 ವರ್ಷದ ಸಾವಿತ್ರಿ ದುರ್ನಲೆ ತನ್ನ 6 ವರ್ಷದ ಮಗನ ಕುತ್ತಿಗೆ ಹಿಸುಕಿ ಕೊಲೆಗೈದು ಬಳಿಕ ಶತಾಬ್ದಿ ಆಸ್ಪತ್ರೆಗೆ ಕರೆತಂದು ಮಗನ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ ಎಂದು ವೈದ್ಯರ ಬಳಿ ನಾಟಕವಾಡಿದ್ದಾಳೆ. ಆದರೆ ಮಗು ಈಗಾಗಲೇ ಸತ್ತಿದೆ ಎಂದು ವೈದ್ಯರು ಘೋಷಿಸಿದ್ದಾರೆ. ಜತೆಗೆ ಅದರದು ಅಸಹಜ ಸಾವು ಎಂದು ವರದಿ ನೀಡಿದ್ದಾರೆ.
 
ವೈದ್ಯರು ನೀಡಿದ ಮಾಹಿತಿಯ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ತಾಯಿಯನ್ನು ಕಠಿಣವಾಗಿ ವಿಚಾರಣೆಗೊಳಪಡಿಸಿದ್ದಾರೆ. ಮೊದಲು ಮೊದಲು ಮಗು ಎರಡು ದಿನಗಳಿಂದ ಅನಾರೋಗ್ಯಕ್ಕೀಡಾಗಿತ್ತು ಎಂದು ಹೇಳಿದ ತಾಯಿ ಕೊನೆಗೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. 
 
ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. 


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
 
 
ಕರ್ನಾಟಕದ ಗುಲಬರ್ಗಾ ಮೂಲದ ಮಹಿಳೆ ಕೂಲಿಕಾರ್ಮಿಕನ ಜತೆ ಮದುವೆಯಾಗಿದ್ದಳು. ಆತ ಕಳೆದ ನಾಲ್ಕು ವರ್ಷದ ಹಿಂದೆ ಸಾವನ್ನಪ್ಪಿದ್ದ. ವಾಸಿಸಲು ಮನೆಯೂ ಇಲ್ಲದ ಅವಳು ಮಗನನ್ನು ಸಾಕಲು ಹೆಣಗಾಡುತ್ತಿದ್ದಳು. ತಿಂಗಳಿಗೆ 4,000 ದುಡಿಯುತ್ತಿದ್ದಳಾದರೂ ಸದಾ ಅನಾರೋಗ್ಯದಿಂದ ಬಳಲುತ್ತಿದ್ದ ಮಗನ ಔಷಧಕ್ಕೆ ಆ ಹಣ ಸಾಕಾಗುತ್ತಿರಲಿಲ್ಲ. ಹೀಗಾಗಿ ಮಗನನ್ನು ಸಾಯಿಸಿರುವುದಾಗಿ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments