Webdunia - Bharat's app for daily news and videos

Install App

ಬ್ಯಾಂಕ್‌ನಲ್ಲಿ ಹಣ ದೊರೆಯದಿದ್ದರಿಂದ ರಸ್ತೆ ತಡೆ ನಡೆಸಿದ ಗ್ರಾಮಸ್ಥರು

Webdunia
ಗುರುವಾರ, 1 ಡಿಸೆಂಬರ್ 2016 (12:55 IST)
ನೋಟು ನಿಷೇಧಧ 22 ದಿನಗಳ ನಂತರವೂ ಬ್ಯಾಂಕ್‌ಗಳು ಹಣದ ಕೊರತೆ ಎದುರಿಸುತ್ತಿರುವುದರಿಂದ ಆಕ್ರೋಶಗೊಂಡ ಗ್ರಾಮಸ್ಥರು ನೋಯ್ಡಾ- ಸಿಕಂದರಾಬಾದ್ ರಸ್ತೆಯನ್ನು ಸುಮಾರು ಒಂದು ಗಂಟೆ ಕಾಲ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದಾನಕೂರ್‌ ಪಟ್ಟಣದ ಮಂಡಿ ಶ್ಯಾಮ್ ನಗರ್ ಪ್ರದೇಶದಲ್ಲಿರುವ ಬ್ಯಾಂಕ್‌ಗಳಉ ತಮ್ಮ ಬ್ಯಾಂಕ್ ಮುಂದೆ ನೋ ಕ್ಯಾಶ್ ಎಂದು ಬೋರ್ಡ್ ಹಾಕಿರುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಲು ನಿರ್ಧರಿಸಿದರು ಎಂದು ಮೂಲಗಳು ತಿಳಿಸಿವೆ.
 
ಗ್ರಾಮಸ್ಥರು ಬ್ಯಾಂಕ್‌ಗಳಿಗೆ ನುಗ್ಗಿ ಹೊರಗಡೆಯ ದ್ವಾರಗಳಿಗೆ ಬೀಗ ಜಡಿದಿದ್ದಲ್ಲದೇ ರಸ್ತೆ ತಡೆ ನಡೆಸಿದಾಗ ಸಾವಿರಾರು ವಾಹನಗಳು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಕಳೆದ ಮೂರು ದಿನಗಳಿಂದ 2000 ರೂಪಾಯಿಗಳನ್ನು ಡ್ರಾ ಮಾಡಲು ಬ್ಯಾಂಕ್‌ಗೆ ಬರುತ್ತಿದ್ದೇನೆ. ಆದರೆ, ಹಣ ದೊರೆಯುತ್ತಿಲ್ಲ. ಬ್ಯಾಂಕ್ ಅಧಿಕಾರಿಗಳು ಹಣವಿಲ್ಲ ಎಂದು ಹೇಳುತ್ತಿದ್ದಾರೆ. ಎಟಿಎಂಗಳಲ್ಲೂ ಹಣವಿಲ್ಲ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments