Webdunia - Bharat's app for daily news and videos

Install App

ಪ್ರಧಾನಿ ಮೋದಿ ಜನವಿರೋಧಿ ನೀತಿಗೆ ಬೇಸತ್ತು ಬಿಜೆಪಿ ಸಂಸದ ರಾಜೀನಾಮೆ

Webdunia
ಶುಕ್ರವಾರ, 8 ಡಿಸೆಂಬರ್ 2017 (15:33 IST)
ಮಹಾರಾಷ್ಟ್ರದ ಗೊಂಡಿಯಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ನಾನಾ ಪಾಟೋಳೆ ರಾಜೀನಾಮೆ ಬಿಜೆಪಿಯಲ್ಲಿನ ಅಂತರಿಕ ಬಂಡಾಯ ಬಹಿರಂಗವಾಗಿದೆ. 
ಪ್ರಧಾನಿ ಮೋದಿ ಸರಕಾರದ ರೈತ ವಿರೋಧಿ ನೀತಿ, ನೋಟು ನಿಷೇಧ ಮತ್ತು ಜಿಎಸ್‌ಟಿ ವಿಫಲತೆ ಸೇರಿದಂತೆ ತಮ್ಮ ರಾಜೀನಾಮೆಗೆ 14 ಕಾರಣಗಳನ್ನು ನೀಡಿದ್ದಾರೆ. ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
 
ರೈತರ ಸಂಕಷ್ಟಗಳನ್ನು ಪರಿಹರಿಸುವಂತಹ ಯಾವುದೇ ಯೋಜನೆ ಕೇಂದ್ರ ಸರಕಾರದಲ್ಲಿಲ್ಲ. ಪ್ರಧಾನಿ ಮೋದಿ ಬಳಿ ರೈತರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದೆ. ಆದರೆ.ಅವರೂ ನಿರ್ಲಕ್ಷ ತೋರಿದರು ಎಂದು ಕಿಡಿಕಾರಿದ್ದಾರೆ.
 
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಪಾಟೋಳ್, ಚುನಾವಣೆಯಲ್ಲಿ ಎನ್‌ಸಿಪಿ ಪಕ್ಷದ ಪ್ರಭಾವಿ ನಾಯಕ ಪ್ರಫುಲ್ ಪಟೇಲ್ ಅವರನ್ನು ಸೋಲಿಸಿದ್ದರು.
 
"ನಾನು ಬಿಜೆಪಿ ಪಕ್ಷಕ್ಕೆ ಸೇರಿಕೊಂಡ ಉದ್ದೇಶಗಳು ಸುಳ್ಳಾಗಿವೆ, ಆದರೆ ಈಗ ರಾಜೀನಾಮೆ ನೀಡಿದ್ದರಿಂದ ಮನಸ್ಸು ಹಗುರವಾಗಿದೆ. ಮುಂದೆ ಯಾವ ಪಕ್ಷ ಸೇರುತ್ತೇನೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
 
ಪ್ರಧಾನಿ ಮೋದಿ ಯಾರೂ ಪ್ರಶ್ನಿಸುವುದನ್ನು, ಟೀಕಿಸುವುದನ್ನು ಸಹಿಸುವುದಿಲ್ಲ. ಕೇಂದ್ರ ಸಚಿವರು ಸದಾ ಆತಂಕವನ್ನು ಎದುರಿಸುತ್ತಿದ್ದಾರೆ. ನನ್ನ ಹೆಸರು ಕೂಡಾ ಮೋದಿಯ ಹಿಟ್ ಲಿಸ್ಟ್‌ನಲ್ಲಿತ್ತು. ಆದರೆ, ನಾನು ಯಾರಿಗೂ ಹೆದರುವುದಿಲ್ಲ ಎಂದು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments