ಪ್ರಧಾನಿ ಮೋದಿ ಜನವಿರೋಧಿ ನೀತಿಗೆ ಬೇಸತ್ತು ಬಿಜೆಪಿ ಸಂಸದ ರಾಜೀನಾಮೆ

Webdunia
ಶುಕ್ರವಾರ, 8 ಡಿಸೆಂಬರ್ 2017 (15:33 IST)
ಮಹಾರಾಷ್ಟ್ರದ ಗೊಂಡಿಯಾ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ನಾನಾ ಪಾಟೋಳೆ ರಾಜೀನಾಮೆ ಬಿಜೆಪಿಯಲ್ಲಿನ ಅಂತರಿಕ ಬಂಡಾಯ ಬಹಿರಂಗವಾಗಿದೆ. 
ಪ್ರಧಾನಿ ಮೋದಿ ಸರಕಾರದ ರೈತ ವಿರೋಧಿ ನೀತಿ, ನೋಟು ನಿಷೇಧ ಮತ್ತು ಜಿಎಸ್‌ಟಿ ವಿಫಲತೆ ಸೇರಿದಂತೆ ತಮ್ಮ ರಾಜೀನಾಮೆಗೆ 14 ಕಾರಣಗಳನ್ನು ನೀಡಿದ್ದಾರೆ. ಲೋಕಸಭೆಯ ಸಭಾಪತಿ ಸುಮಿತ್ರಾ ಮಹಾಜನ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
 
ರೈತರ ಸಂಕಷ್ಟಗಳನ್ನು ಪರಿಹರಿಸುವಂತಹ ಯಾವುದೇ ಯೋಜನೆ ಕೇಂದ್ರ ಸರಕಾರದಲ್ಲಿಲ್ಲ. ಪ್ರಧಾನಿ ಮೋದಿ ಬಳಿ ರೈತರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವಂತೆ ಮನವಿ ಮಾಡಿದ್ದೆ. ಆದರೆ.ಅವರೂ ನಿರ್ಲಕ್ಷ ತೋರಿದರು ಎಂದು ಕಿಡಿಕಾರಿದ್ದಾರೆ.
 
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಪಾಟೋಳ್, ಚುನಾವಣೆಯಲ್ಲಿ ಎನ್‌ಸಿಪಿ ಪಕ್ಷದ ಪ್ರಭಾವಿ ನಾಯಕ ಪ್ರಫುಲ್ ಪಟೇಲ್ ಅವರನ್ನು ಸೋಲಿಸಿದ್ದರು.
 
"ನಾನು ಬಿಜೆಪಿ ಪಕ್ಷಕ್ಕೆ ಸೇರಿಕೊಂಡ ಉದ್ದೇಶಗಳು ಸುಳ್ಳಾಗಿವೆ, ಆದರೆ ಈಗ ರಾಜೀನಾಮೆ ನೀಡಿದ್ದರಿಂದ ಮನಸ್ಸು ಹಗುರವಾಗಿದೆ. ಮುಂದೆ ಯಾವ ಪಕ್ಷ ಸೇರುತ್ತೇನೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.
 
ಪ್ರಧಾನಿ ಮೋದಿ ಯಾರೂ ಪ್ರಶ್ನಿಸುವುದನ್ನು, ಟೀಕಿಸುವುದನ್ನು ಸಹಿಸುವುದಿಲ್ಲ. ಕೇಂದ್ರ ಸಚಿವರು ಸದಾ ಆತಂಕವನ್ನು ಎದುರಿಸುತ್ತಿದ್ದಾರೆ. ನನ್ನ ಹೆಸರು ಕೂಡಾ ಮೋದಿಯ ಹಿಟ್ ಲಿಸ್ಟ್‌ನಲ್ಲಿತ್ತು. ಆದರೆ, ನಾನು ಯಾರಿಗೂ ಹೆದರುವುದಿಲ್ಲ ಎಂದು ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments