ಕೇಂದ್ರ ಸಚಿವ ರಾಜೀವ್ ಪ್ರತಾಪ್ ರೂಢಿಯವರ ಕಾರು ಅಪಘಾತ ಸಂಭವಿಸಿದ್ದು, ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಹಾರ್ ರಾಜ್ಯದ ಸರನ್ ಜಿಲ್ಲೆಯ ಚಾಪ್ರಾ ಪಟ್ಟಣಕ್ಕೆ ಕಚೇರಿಯ ಕಾರ್ಯನಿಮಿತ್ಯ ತೆರಳಿ ವಾಪಸಾಗುತ್ತಿದ್ದಾಗ ಪಾಟ್ನಾ ಬಳಿ ಕಾರು ಅಪಘಾತವಾಗಿದೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.
ಏತನ್ಮಧ್ಯೆ, ಆಸ್ಸಾಂನಲ್ಲಿ ತಿರಂಗಾ ಯಾತ್ರೆಯಲ್ಲಿ ಬೈಕ್ನಲ್ಲಿ ತೆರಳುತ್ತಿರುವ ಸಂದರ್ಭದಲ್ಲಿ ಬೈಕ್ನಿಂದ ಬಿದ್ದು ಬಿಜೆಪಿ ಸಂಸದ ಕಾಮಕ್ಯ ಪ್ರಸಾದ್ ಗಾಯಗೊಂಡಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆನಗರಾಭಿವೃದ್ಧಿ ಖಾತೆ ರಾಜ್ಯ ಸಚಿವ ಬಾಬುಲ್ ಸುಪ್ರಿಯೋ ದೆಹಲಿಯ ಮೋತಿ ಬಾಗ್ ಪ್ರದೇಶದಲ್ಲಿ ಬೈಕ್- ಕಾರು ಮಧ್ಯೆ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ