Webdunia - Bharat's app for daily news and videos

Install App

ಪಾರ್ಥ ಅಖಿಲೇಶ್‌ಗೆ ಸಾರಥಿಯಾದ ರಾಹುಲ್

Webdunia
ಶುಕ್ರವಾರ, 20 ಜನವರಿ 2017 (08:38 IST)
ಉತ್ತರಪ್ರದೇಶ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಆಡಳಿತಾರೂಢ ಸಮಾಜವಾದಿ ಪಕ್ಷ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ವಾರಣಾಸಿಯ ಹಲವೆಡೆ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೃಷ್ಣಾರ್ಜುನರಾಗಿ ರಥಾರೂಢರಾಗಿರುವ ಭಿತ್ತಿಪತ್ರಗಳು ರಾರಾಜಿಸುತ್ತಿವೆ.
 
ಈ ಭಿತ್ತಿಪತ್ರಗಳಲ್ಲಿ ಕಾಂಗ್ರೆಸ್ ಉಪಾಧ್ಯಕ್ಷನನ್ನು ಸಾರಥಿ ಕೃಷ್ಣನಂತೆ ಮತ್ತು ಅಖಿಲೇಶ್ ಅವರನ್ನು ಬಿಲ್ಲು ಬಾಣ ಹಿಡಿದಿರುವ ಅರ್ಜುನನಂತೆ ಬಿಂಬಿಸಲಾಗಿದ್ದು, ಸಂಭಾವ್ಯ ಮೈತ್ರಿಗೆ ಬೆಂಬಲದ ಸೂಚಕದಂತಿದೆ. 
 
ವಿಕಾಸದಿಂದ ವಿಜಯದತ್ತ ಇಬ್ಬರು ಮಹಾರಥಿಗಳು ಮುನ್ನುಗುತ್ತಿದ್ದಾರೆ ಎಂಬ ಘೋಷ ವಾಕ್ಯ ಕೂಡ ಈ ಭಿತ್ತಿಪತ್ರದಲ್ಲಿದ್ದು ಸಮಾಜವಾದಿ ಪಕ್ಷದ ಚಿಹ್ನೆ ಸೈಕಲ್ ಕೂಡ ಇದೆ.
 
ನಗರದ ಬೆನಿಯಾಬಾಗ್, ಚೇತಗಂಜ್  ಸೇರಿದಂತೆ ಅನೇಕ ಕಡೆಗಳಲ್ಲಿ ಈ ಪೋಸ್ಟರ್ ಕಂಡು ಬಂದಿವೆ.
 
ದೇಶದಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಇರುವ ರಾಜ್ಯವೆನಿಸಿಕೊಂಡಿರುವ ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 11 ರಿಂದ ಮಾರ್ಚ್ 8 ರವರೆಗೆ ಹಲವು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 11 ರಂದು ಫಲಿತಾಂಶ ಹೊರಬರಲಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments