ಸಮುದ್ರ ವಿಮಾನ ಸೇವೆ ಆರಂಭಿಸಲು ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಿದ ಯುಪಿ ಸರ್ಕಾರ

Webdunia
ಗುರುವಾರ, 9 ಸೆಪ್ಟಂಬರ್ 2021 (12:49 IST)
ಉತ್ತರ ಪ್ರದೇಶ :  ಸರ್ಕಾರವು ವಾರಣಾಸಿ ಹಾಗೂ ಗೋರಕ್ಪುರದ ನಡುವೆ ರಾಜ್ಯದ ಮೊಟ್ಟ ಮೊದಲ ಸಮುದ್ರ ವಿಮಾನ ಸೇವೆಯನ್ನು ಆರಂಭಿಸಲು ಮುಂದಾಗಿದೆ. ಈ ಬಗ್ಗೆ ಅನುಮತಿ ಕೋರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದೆ.

ಉತ್ತರ ಪ್ರದೇಶದ ನಾಗರಿಕ ವಿಮಾನಯಾನ ಸಚಿವ ನಂದ ಗೋಪಾಲ್ ಗುಪ್ತಾ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾರನ್ನು ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಯ ವೇಳೆ ಗೋರಕಪುರದಿಂದ ವಾರಣಾಸಿಗೆ ಸೀ ಪ್ಲೇನ್ ಸೇವೆಯನ್ನು ಆರಂಭಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಇದರ ಜೊತೆಯಲ್ಲಿ ವಿಮಾನಯಾನಕ್ಕೆ ಸಂಬಂಧಿಸಿದ ಇನ್ನೂ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
ನಂದಗೋಪಾಲ ಗುಪ್ತಾ ನಂದಿ ಜ್ಯೋತಿರಾದಿತ್ಯ ಸಿಂಧಿಯಾ ಬಳಿ ಸೀ ಪ್ಲೇನ್ ಸೇವೆಯ ಸಂಬಂಧ ತುರ್ತು ಕ್ರಮ ಜಾರಿಗೆ ಬರುವಂತೆ ಹಾಗೂ ಈ ಯೋಜನೆಯ ಸಂಬಂಧ ಅಧ್ಯಯನ ನಡೆಸುವಂತೆ ಕೇಳಿದ್ದಾರೆ ಎನ್ನಲಾಗಿದೆ.
ಸೀ ಪ್ಲೇನ್ ಸೇವೆಯು ಭೂಮಿ ಹಾಗೂ ಜಲಮಾರ್ಗಗಳರೆಡರಲ್ಲಿಯೂ ಚಲಿಸುವ ಸಾಮರ್ಥ್ಯ ಹೊಂದಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಒಟ್ಟು 100 ಸಮುದ್ರ ವಿಮಾನ ಸೇವೆ ಆರಂಭಕ್ಕೆ ಯೋಚನೆ ನಡೆಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜಾರಕಿಹೊಳಿ ಅಂತಹ ವ್ಯಕ್ತಿಯಲ್ಲ: ಸಚಿವ ಬೋಸರಾಜು

ಮಹೇಶ್‌ ಶೆಟ್ಟಿ ತಿಮರೋಡಿ ಜತೆಗಿನ ಮಾತುಕತೆ ವಿಡಿಯೋ, ಹೊಸ ಬಾಂಬ್ ಸಿಡಿಸಿದ ಚಿನ್ನಯ್ಯನ 2ನೇ ಪತ್ನಿ

ಜುಬೀನ್ ಗಾರ್ಗ್ ಸಾವಿನ ಬಗ್ಗೆ ಅನುಮಾನ, ತನಿಖೆಗೆಗೆ ಅಸ್ಸಾಂ ಸಿಎಂ ಆದೇಶ

ಕುರುಬರ ಬಗ್ಗೆ ಮಾತನಾಡಿ ಕೇಸ್ ಹಾಕಿಸಿಕೊಂಡ ಛಲವಾದಿ ನಾರಾಯಣಸ್ವಾಮಿ, ಶ್ರೀವತ್ಸ

ರಾಜಕೀಯ ಏನೇ ಇರ್ಲಿ ತಮ್ಮ ಸಮುದಾಯಕ್ಕಾಗಿ ಒಂದಾದ ಡಿಕೆ ಶಿವಕುಮಾರ್, ಕುಮಾರಸ್ವಾಮಿ

ಮುಂದಿನ ಸುದ್ದಿ
Show comments