Webdunia - Bharat's app for daily news and videos

Install App

ಲೋಕಪಾಲ್ ಜಾರಿಗೊಳಿಸಿ ಇಲ್ಲದಿದ್ರೆ ಹೋರಾಟ: ಪ್ರಧಾನಿ ಮೋದಿಗೆ ಅಣ್ಣಾ ಹಜಾರೆ ಎಚ್ಚರಿಕೆ

Webdunia
ಬುಧವಾರ, 30 ಆಗಸ್ಟ್ 2017 (15:29 IST)
ಲೋಕಪಾಲರನ್ನು ನೇಮಕ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸರಕಾರ ವಿಳಂಬ ಮಾಡುತ್ತಿರುವ ಹಿನ್ನೆಲೆಯಲ್ಲಿ  ಮತ್ತೊಂದು ಸುತ್ತಿನ ಹೋರಾಟವನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಸಿದ್ದವಾಗುತ್ತಿದ್ದು ದಿನಾಂಕವನ್ನು ಶೀಘ್ರದಲ್ಲೇ ಘೋಷಿಸುವುದಾಗಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಹಾರ ಭದ್ರತೆ ಮತ್ತು ರೈತರ ಕಲ್ಯಾಣ ಹಾಗೂ ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೆ ಮತ್ತು ಲೋಕಾಯುಕ್ತರನ್ನು ನೇಮಕ ಮಾಡುವವರೆಗೂ ಚಳವಳಿಯನ್ನು ಮುಂದುವರೆಸಲಾಗುವುದು. ಮೋದಿ ಸರಕಾರದ ಹೇಳಿಕೆ ಮತ್ತು ಕಾರ್ಯದಲ್ಲಿ ತುಂಬಾ ವ್ಯತ್ಯಾಸವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ಪ್ರಸಕ್ತ ವರ್ಷದ ಮಾರ್ಚ್ ತಿಂಗಳಲ್ಲಿ ಪ್ರದಾನಿ ಮೋದಿಗೆ ಪತ್ರ ಬರೆದ ಹಜಾರೆ, ಭ್ರಷ್ಟಾಚಾರ ನಿರ್ಮೂಲನೆಗೊಳಿಸುವ ಸರಕಾರದ ಭರವಸೆ ಈಡೇರಿಲ್ಲ. ಪ್ರಧಾನಿ ಮೋದಿಯವರಿಗೆ ಮತ್ತೊಂದು ಪತ್ರ ಬರೆದು ಪ್ರತಿಭಟನೆ ಆರಂಭಿಸುವ ದಿನಾಂಕವನ್ನು ಘೋಷಿಸುತ್ತೇನೆ ಎಂದು ತಿಳಿಸಿದ್ದಾರೆ. 
 
ಕಳೆದ ಮೂರು ವರ್ಷಗಳ ಪ್ರಧಾನಿ ಮೋದಿ ಅಡಳಿತದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಭ್ರಷ್ಟಾಚಾರ ಎಂದಿನಂತೆ ಮುಂದುವರಿದಿದೆ. ಒಂದು ವೇಳೆ, ವಿಪಕ್ಷ ನಾಯಕ ಗೈರುಹಾಜರಿಯಲ್ಲಿ ಸಿಬಿಐ ನಿರ್ದೇಶಕರ ನೇಮಕ ಮಾಡುುವುದಾದರೇ ಲೋಕಾಪಾಲ್‌ರನ್ನು ಯಾಕೆ ನೇಮಕ ಮಾಡಲು ಸಾಧ್ಯವಾಗುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
 
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಲೋಕಾಯುಕ್ತರನ್ನು ನೇಮಕ ಮಾಡಲಾಗಿಲ್ಲ. ಪ್ರಧಾನಿಯವರ ಆದೇಶವನ್ನು ಬಿಜೆಪಿ ಅಡಳಿತವಿರುವ ರಾಜ್ಯಗಳು ಪಾಲಿಸುವುದಿಲ್ಲ ಎನ್ನುವುದು ನಂಬಲು ಸಾದ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
2011ರಲ್ಲಿ ರಾಮ್‌ಲೀಲಾ ಮೈದಾನದಲ್ಲಿ ನಡೆದ ಉಪವಾಸ ಸತ್ಯಾಗ್ರಹ ರಾಷ್ಟ್ರವ್ಯಾಪಿ ಗಮನ ಸೆಳೆದಿದ್ದರಿಂದ ಸಂಸತ್ತಿನಲ್ಲಿ ಲೋಕಪಾಲ್ ಮಸೂದೆ ಅಂಗೀಕರಿಸಲು ಸಾಧ್ಯವಾಯಿತು. ಪ್ರಸ್ತುತ ಮೋದಿ ಸರಕಾರ ಲೋಕಪಾಲ್‌ರನ್ನು ನೇಮಕ ಮಾಡಲು ಹಿಂದೇಟು ಹಾಕುತ್ತಿರುವುದರಿಂದ ಹೋರಾಟ ಬಿಟ್ಟು ಬೇರೆ ದಾರಿಯಿಲ್ಲ ಎಂದು ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಎಂದು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಮುಂದಿನ ಸುದ್ದಿ
Show comments