Webdunia - Bharat's app for daily news and videos

Install App

ಟ್ರಾಫಿಕ್ ರೂಲ್ಸ್ ಬ್ರೇಕ್: ಬಿಜೆಪಿ ನಾಯಕನಿಗೆ ದಂಡ ವಿಧಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ಎತ್ತಂಗಡಿ

Webdunia
ಭಾನುವಾರ, 2 ಜುಲೈ 2017 (14:44 IST)
ಲಖನೌ:ಉತ್ತರ ಪ್ರದೇಶದ ಬುಲಂದ್‍ಶಹರ್ ಜಿಲ್ಲೆಯಲ್ಲಿ ಬಿಜೆಪಿ ನಾಯಕರೊಬ್ಬರು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ದಂಡ ವಿಧಿಸಿದ ಮಹಿಳಾ ಪೊಲೀಸ್ ಅಧಿಕಾರಿ ಶ್ರೇಷ್ಠಾ ಠಾಕೂರ್ ಅವರನ್ನು ಸರ್ಕಾರ ಎತ್ತಂಗಡಿ ಮಾಡಿದೆ.
 
ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದು ಮಾತ್ರವಲ್ಲದೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಕ್ಕಾಗಿ ಅಲ್ಲಿನ ಸ್ಥಳೀಯ ಬಿಜೆಪಿ ಮುಖಂಡ ಮತ್ತು  ಐವರು ಕಾರ್ಯಕರ್ತರನ್ನು ಶ್ರೇಷ್ಠಾ ಜೈಲಿಗಟ್ಟಿದ್ದರು.ಈ ಪ್ರಕರಣ ನಡೆದ ಒಂದೇ ವಾರದಲ್ಲಿ ಶ್ರೇಷ್ಠಾ ಅವರು ಸೇರಿದಂತೆ ಅವರ ಹಲವು ಸಹೋದ್ಯೋಗಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಉತ್ತರ ಪ್ರದೇಶದ ಬಹರೈಚ್ ಗೆ ಶ್ರೇಷ್ಠಾ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂದು  ತಿಳಿದುಬಂದಿದೆ.
 
ಶ್ರೇಷ್ಠಾ ಅವರು ದಂಡ ವಿಧಿಸಿದ್ದ ಪ್ರಕರಣದ ಬಗ್ಗೆ ಬಿಜೆಪಿಯ 11 ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಅವರಿಗೆ ದೂರು ನೀಡಿದ್ದರು. ಅಲ್ಲದೇ ಬಿಜೆಪಿ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡ  ಪೊಲೀಸ್ ಅಧಿಕಾರಿಯನ್ನು ಎತ್ತಂಗಡಿ ಮಾಡಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಶ್ರೇಷ್ಠಾ ಅವರು ಸಿಎಂ ಆದಿತ್ಯನಾಥ್ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದರಿಂದ ವರ್ಗಾವಣೆ ಮಾಡಲಾಗಿದೆ ಎಂಬುದು ಕೆಲ ಬಿಜೆಪಿ ನಾಯಕರ ವಾದ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments