Webdunia - Bharat's app for daily news and videos

Install App

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಗೆಲುವಿಗಾಗಿ ಕಮಲಾ ಹ್ಯಾರಿಸ್‌ ಪೂರ್ವಿಕರ ಊರಲ್ಲಿ ವಿಶೇಷ ಪೂಜೆ

Sampriya
ಮಂಗಳವಾರ, 5 ನವೆಂಬರ್ 2024 (15:25 IST)
Photo Courtesy X
ತಿರುವರೂರು: ಅಮೇರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಅಖಾಡದಲ್ಲಿರುವ ಕಮಲಾ ಹ್ಯಾರಿಸ್‌ ಗೆಲುವಿಗಾಗಿ  ತಿರುವರೂರು ಜಿಲ್ಲೆಯ ಕಮಲಾ ಹ್ಯಾರಿಸ್ ಅವರ ಪೂರ್ವಜರ ಗ್ರಾಮದಲ್ಲಿರುವ ಶ್ರೀ ಧರ್ಮ ಶಾಸ್ತಾ ಶ್ರೀ ಸೇವಕ ಪೆರುಮಾಳ್ ದೇವಸ್ಥಾನದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು.

ವಿಶೇಷ ಪೂಜೆಯ ನಂತರ ಅರ್ಚಕರು ಭಕ್ತರಿಗೆ ಪ್ರಸಾದವನ್ನು ವಿತರಿಸಿದರು. ಇನ್ನೂ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅಮೇರಿಕಾದಿಂದ ಕಮಲಾ ಹ್ಯಾರಿಸ್ ಬೆಂಬಲಿಗರು ಆಗಮಿಸಿದ್ದರು. ತುಳಸೇಂದ್ರಪುರಂ ಗ್ರಾಮವು ಕಮಲಾ ಹ್ಯಾರಿಸ್ ಅವರ ತಾಯಿಯ ಅಜ್ಜ ಪಿವಿ ಗೋಪಾಲನ್ ಅವರ ಜನ್ಮಸ್ಥಳವಾಗಿದೆ.

ನೆವಾಡಾದ ಲಾಸ್ ವೇಗಾಸ್‌ನಿಂದ ಎಎನ್‌ಐ ಜೊತೆ ಮಾತನಾಡಿದ ಶೆರಿನ್ ಶಿವಲಿಂಗ, "ಕಮಲಾ ಹ್ಯಾರಿಸ್ ಅವರ ಅಜ್ಜಿಯರು ಹುಟ್ಟಿ ಬೆಳೆದ ಗ್ರಾಮವನ್ನು ನೋಡಲು ಬಂದಿದ್ದೇನೆ, ನಾವು ಚುನಾವಣೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ, ನಾವು ಆತಂಕದಲ್ಲಿದ್ದೇವೆ, ಅವರು ಗೆಲ್ಲಬೇಕೆಂದು ನಾವು ಬಯಸುತ್ತೇವೆ ಎಂದು ಹೇಳಿದರು.

ಇದೇ ವೇಳೆ, ಕಮಲಾ ಹ್ಯಾರಿಸ್‌ಗಾಗಿ ತಿರುವರೂರಿನ 'ತುಳಸೇಂದ್ರಪುರಂ' ಗ್ರಾಮದಲ್ಲಿ ಅನುಷಾನಾಥ್ ಅವರ ಅನುಕ್ರಾಗ್ನಿ ಸಂಸ್ಥೆಯಿಂದ ಮತ್ತೊಂದು ಪೂಜೆಯನ್ನು ಆಯೋಜಿಸಲಾಗಿತ್ತು.

ಸಂಸ್ಥೆಯ ಸಂಸ್ಥಾಪಕ ಬಳ್ಳು ಅವರು ಮುಂಬರುವ ಚುನಾವಣೆಯಲ್ಲಿ ಉಪಾಧ್ಯಕ್ಷ ಹ್ಯಾರಿಸ್ ಗೆಲ್ಲುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಕಮಲಾ ಹ್ಯಾರಿಸ್ ಅವರು ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲಿದ್ದಾರೆ, ಅವರು ಚುನಾವಣೆಯಲ್ಲಿ ಗೆಲ್ಲುವುದು ಖಚಿತ, ಅವರ ಗೆಲುವಿಗಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದೇವೆ, ಚುನಾವಣೆಯಲ್ಲಿ ಗೆದ್ದರೆ ಇಡೀ ರಾಜ್ಯಕ್ಕೆ ಸಂತಸ ತಂದಿದೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments