Webdunia - Bharat's app for daily news and videos

Install App

ಲಡ್ಡಿಗೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ: ಶುದ್ಧೀಕರಣಕ್ಕೆ ತಿರುಪತಿಯಲ್ಲಿ ಶಾಂತಿ ಹೋಮ

Sampriya
ಸೋಮವಾರ, 23 ಸೆಪ್ಟಂಬರ್ 2024 (14:18 IST)
ಹೈದರಾಬಾದ್: ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುತ್ತಿದ್ದ ಲಡ್ಡಿಗೆ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆಯಾದ ಹಿನ್ನೆಲೆಯಲ್ಲಿ, ದೇವಸ್ಥಾನದ ಶುದ್ಧೀಕರಣದ ಬಗ್ಗೆ ಚಿಂತನೆ ನಡೆಸಲಾಗಿದೆ.

ತಿರುಪತಿ ತಿರುಮಲ ದೇವಸ್ಥಾನಂ (ಟಿಟಿಡಿ) ಆಡಳಿತ ಮಂಡಳಿಯು ಸಂಪ್ರೋಕ್ಷಣ ಕಾರ್ಯದ ಭಾಗವಾಗಿ ಶಾಂತಿ ಹೋಮವನ್ನು ಕೈಗೊಂಡಿದೆ.

ತಿರುಪತಿಯಲ್ಲಿ ಇಂದು ಶಾಂತಿ ಹೋಮವನ್ನು ಕೈಗೊಂಡಿದ್ದು, ಈ ಹೋಮದಲ್ಲಿ ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿ ಶಾಮಲಾರಾವ್ ಮತ್ತು ಮಂಡಳಿಯ ಇತರೆ ಅಧಿಕಾರಿಗಳು ಸೇರಿದಂತೆ ಅನೇಕ ಅರ್ಚಕರು ಪಾಲ್ಗೊಂಡಿದ್ದರು ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಟಿಟಿಡಿ ವಿಚಾರವಾಗಿ ಏನು ಮಾಡಬೇಕು ಹಾಗೂ ಅದನ್ನು ಹೇಗೆ ಮಾಡಬೇಕು ಎಂಬ ಬಗ್ಗೆ ನಾವು ಚರ್ಚಿಸುತ್ತಿದ್ದೇವೆ. ಸಂಪ್ರೋಕ್ಷಣ (ವಿಧಿಬದ್ಧವಾದ ಶುದ್ಧೀಕರಣ ಕಾರ್ಯ) ಹೇಗೆ ನಡೆಯಬೇಕು ಎಂಬುದನ್ನು ಕಂಚಿ ಪೀಠಾಧಿಪತಿಗಳು, ಸನಾತದ ಧರ್ಮದ ವಿದ್ವಾಂಸರ ಜೊತೆ ಚರ್ಚಿಸಿ ತೀರ್ಮಾನಿಸುತ್ತೇವೆ. ನಾವು ಈ ನಿಟ್ಟಿನಲ್ಲಿ ಈಗಾಗಲೇ ಆಲೋಚನೆ ನಡೆಸಿದ್ದೇವೆ ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಸುದ್ದಿಗಾರರಿಗೆ ತಿಳಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments