Webdunia - Bharat's app for daily news and videos

Install App

ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ: ಟಿಟಿಡಿ ಅಧೀನದ ದೇವಾಲಯದಲ್ಲಿ ಪವಿತ್ರೋತ್ಸವ

Sampriya
ಶುಕ್ರವಾರ, 27 ಸೆಪ್ಟಂಬರ್ 2024 (14:56 IST)
ತಿರುಮಲ: ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಮಿಶ್ರಣ ವಿವಾದಕ್ಕೆ ಸಂಬಂಧಿಸಿದಂತೆ ಟಿಟಿಡಿ ಅಧೀನದ ದೇವಾಲಯದಲ್ಲಿ ಮತ್ತೆ ಶುದ್ಧೀಕರಣ ಕಾರ್ಯ ನಡೆಯುತ್ತಿದೆ. ನಾಲ್ಕು ದಿನ ನಡೆಯುವ ಪವಿತ್ರೋತ್ಸವಕ್ಕೆ ಶುಕ್ರವಾರ ಚಾಲನೆ ನೀಡಲಾಗಿದೆ.

ತಿರುಪತಿ ತಿರುಮಲ ದೇವಸ್ಥಾನಂ ದೇಗುಲದ ಪಾವಿತ್ರ್ಯತೆಗೆ ಧಕ್ಕೆಯಾದ ಹಿನ್ನೆಲೆಯಲ್ಲಿ ಇಂದಿನಿಂದ ಸೋಮವಾರದವರೆಗೆ, ಪ್ರತಿ ದಿನ ಸಂಜೆ 6:30 ರ ಹೊತ್ತಿಗೆ ಶುದ್ಧಿಕಾರ್ಯ ನಡೆಯಲಿದೆ. ಬೆಂಗಳೂರಿನ ವೈಯಾಲಿಕಾವಲ್‌ನಲ್ಲಿರುವ ಟಿಟಿಡಿ ದೇವಾಲಯದಲ್ಲೂ ಶುದ್ಧಿಕಾರ್ಯ ನಡೆಯಲಿದೆ.

ಮೊದಲ ದಿನ ಆಚಾರ್ಯವರನಮ್, ಎರಡನೇ ದಿನ ಹೋಮ, ಮೂರನೇ ದಿನ ಪವಿತ್ರ ಸಮರ್ಪಣ ಮತ್ತು ನಾಲ್ಕನೇ ದಿನ ಪವಿತ್ರೋತ್ಸವ ನಡೆಸಲಾಗುವುದು. ಈ ಕಾರ್ಯಕ್ರಮಗಳಿಗೆ ತಿರುಪತಿಯಿಂದ 10 ಅರ್ಚಕರು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅರ್ಚಕರು ಮೂರು ದಿನದ‌ ಪೂಜೆ, ಹೋಮ, ಹವನ ಮಾಡಲಿದ್ದಾರೆ.

ಟಿಟಿಡಿ ದೇವಾಲಯದಲ್ಲಿ ಅಗ್ನಿಕುಂಡ ಹೋಮಕುಂಡಗಳ ತಯಾರಿ ಮಾಡಿಕೊಳ್ಳಲಾಗಿದೆ. ಪವಿತ್ರೋತ್ಸವ ಶುದ್ಧಿ ಕಾರ್ಯದಲ್ಲಿ ದೇವಾಲಯದ ಆಡಳಿತ ಮಂಡಳಿ ಭಕ್ತರಿಗೂ ಅವಕಾಶ ನೀಡಿದೆ. ಇಬ್ಬರು ₹ 1 ಸಾವಿರ ರಶೀದಿ ಪಡೆದು ಪೂಜೆಯಲ್ಲಿ ಭಾಗಿಯಾಗಲು ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments