Webdunia - Bharat's app for daily news and videos

Install App

ಯುಪಿ ಚುನಾವಣೆ: 105 ಸ್ಥಾನ ಕಾಂಗ್ರೆಸ್‌ಗೆ

Webdunia
ಭಾನುವಾರ, 22 ಜನವರಿ 2017 (15:00 IST)
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ ನಡುವೆ ಇದ್ದ ಗೊಂದಲ ನಿವಾರಣೆಯಾಗಿದ್ದು, ಮೈತ್ರಿ ಖಚಿತವಾಗಿದೆ.
ಒಟ್ಟು 403 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ 105 ಸೀಟುಗಳನ್ನು ಬಿಟ್ಟುಕೊಡಲಾಗಿದೆ, ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
 
ಆರಂಭದಲ್ಲಿ 110 ಸೀಟುಗಳಿಗೆ ಕಾಂಗ್ರೆಸ್ ಪಟ್ಟು ಹಿಡಿದಿತ್ತು. ಆದರೆ ಅಖಿಲೇಶ್ ಕೇವಲ 99 ಸೀಟುಗಳನ್ನಷ್ಟೇ ನೀಡಲು ಒಪ್ಪಿದ್ದರು. ಇದು ಕಾಂಗ್ರೆಸ್ ಮುನಿಸಿಗೆ ಕಾರಣವಾಗಿತ್ತು. ಉಭಯ ಪಕ್ಷದ ನಾಯಕರು ಮಾತುಕತೆಯನ್ನು ಮುಂದುವರೆಸಿದ್ದರು. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಖಿಲೇಶ್ ಜತೆಗೆ ಮಾತುಕತೆ ನಡೆಸಿದ್ದರು. ಜತೆಗೆ ಪಕ್ಷದ ಪ್ರತಿನಿಧಿಗಳನ್ನು ಅಖಿಲೇಶ್ ಜತೆ ಮಾತುಕತೆಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಸಹ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿ ಅಖಿಲೇಶ್‌ಗೆ ಕರೆ ಮಾಡಿದ್ದರು. ಕಾಂಗ್ರೆಸ್ ಒತ್ತಾಯಕ್ಕೆ ಕೊನೆಗೂ ಬಗ್ಗಿರುವ ಅಖಿಲೇಶ್ ಹೆಚ್ಚುವರಿಯಾಗಿ 6 ಸೀಟುಗಳನ್ನು ನೀಡಲು ಒಪ್ಪಿದ್ದಾರೆ. 
 
ಅಖಿಲೇಶ್ ನೇತೃತ್ವದ ಪಕ್ಷ 298 ಸೀಟುಗಳಲ್ಲಿ ಕಣಕ್ಕಿಳಿಯಲಿದೆ. 
 
ಇಂದು ಸಮಾಜವಾದಿ ಪಕ್ಷದ ಚುನಾವಣಾ  ಪ್ರಣಾಳಿಕೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷ ಅಖಿಲೇಶ್‌ ಯಾದವ್‌ ಬಿಡುಗಡೆ ಮಾಡಿದ್ದು, ಬಿಜೆಪಿ ‘ಅಚ್ಚೇ ದಿನ’ ತರುವುದಾಗಿ ನೀಡಿದ್ದ ಭರವಸೆಗಳು ಸುಳ್ಳಾದವು ಎಂದು ಕಿಡಿಕಾರಿದ್ದಾರೆ. 
 
ಉತ್ತರ ಪ್ರದೇಶದಲ್ಲಿ ಫೆಬ್ರವರಿ 11 (73ಕ್ಷೇತ್ರಗಳು), ಫೆಬ್ರವರಿ 15 (67 ಕ್ಷೇತ್ರಗಳು), ಫೆಬ್ರವರಿ 19 (69), ಫೆಬ್ರವರಿ 23 (53), ಫೆಬ್ರವರಿ 27 (52), ಮಾರ್ಚ್ 3 (49) ಮತ್ತು ಮಾರ್ಚ್ 8 (40) ರಂದು ಒಟ್ಟು 7ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 11 ರಂದು ಫಲಿತಾಂಶ ಹೊರಬೀಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಕಾಶಿ ಮೇಘಸ್ಫೋಟ: ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ–ಕಾಲೇಜಿಗೆ ರಜೆ ಘೋಷಣೆ

ಧರ್ಮಸ್ಥಳ, ಎಲ್ಲರ ಚಿತ್ತ ನಾಳೆಯ ಕೊನೆಯ ಪಾಯಿಂಟ್‌ನತ್ತ, ಇಂದಿನ ಶೋಧದಲ್ಲಿ ಬಿಗ್‌ಟ್ವಿಸ್ಟ್‌

ಉತ್ತರಕಾಶಿಯ ರಣಭೀಕರ ಮೇಘಸ್ಫೋಟ: ಮಿಡಿದ ಮೋದಿಯಿಂದ, ರಕ್ಷಣಾ ನೆರವು ಘೋಷಣೆ

ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನಕ್ಕೆ ಪ್ರಧಾನಿ ಮೋದಿ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಸಂತಾಪ

ಅಕ್ಟೋಬರ್ 1 ರಿಂದ ದೆಹಲಿಯಿಂದ ಮನಿಲಾಗೆ ನೇರ ವಿಮಾನಯಾನ ಆರಂಭ

ಮುಂದಿನ ಸುದ್ದಿ
Show comments