Webdunia - Bharat's app for daily news and videos

Install App

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

Krishnaveni K
ಸೋಮವಾರ, 19 ಮೇ 2025 (15:36 IST)
Photo Credit: X
ನವದೆಹಲಿ: ಯೂ ಟ್ಯೂಬರ್ ಬಳಿಕ ನಮ್ಮ ದೇಶದಲ್ಲೇ ಇದ್ದುಕೊಂಡು ನಮ್ಮ ದೇಶಕ್ಕೇ ದ್ರೋಹವೆಸಗುತ್ತಿದ್ದ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ತಿನ್ನೋದು ಭಾರತದ ಅನ್ನ, ಮಾಡೋದು ಪರಮ ಪಾಪಿ ಪಾಕಿಸ್ತಾನದ ಸೇವೆ.

ದುಡ್ಡೊಂದು ಇದ್ದರೆ ಏನು ಬೇಕಾದರೂ ಮಾಡುವ ಕಲಿಗಾಲ ಇದು. ಉತ್ತರ ಪ್ರದೇಶದ ರಾಮ್ ಪುರದಲ್ಲಿ ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಿದ ಆರೋಪದಲ್ಲಿ ಉದ್ಯಮಿಯನ್ನು ಅರೆಸ್ಟ್ ಮಾಡಲಾಗಿದೆ. ಈತನನ್ನು ಶಹಜಾಝ್ ಎಂದು ಗುರುತಿಸಲಾಗಿದೆ.

ಗಡಿಯಲ್ಲಿ ಅಕ್ರಮ ನುಸುಳುಕೋರರಿಗೆ ಸಹಾಯ ಮಾಡುವುದು, ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡುವುದು ಕೆಲಸ ಮಾಡುತ್ತಿದ್ದ. ಅಲ್ಲದೆ ದೇಶದ ಭದ್ರತೆಗೆ ಸಂಬಂಧಪಟ್ಟ ಸೂಕ್ಷ್ಮ ವಿಚಾರಗಳನ್ನು ಪಾಕಿಸ್ತಾನಕ್ಕೆ ಒದಗಿಸುತ್ತಿದ್ದ. ಅಲ್ಲದೆ, ಸಾಕಷ್ಟು ಬಾರಿ ಪಾಕಿಸ್ತಾನಕ್ಕೆ ಹೋಗಿ ಬಂದಿದ್ದ ಎನ್ನುವುದು ತಿಳಿದುಬಂದಿದೆ.

ಭಾರತದಲ್ಲಿರುವ ಐಎಸ್ಐ ಏಜೆಂಟರುಗಳಿಗೆ ಭಾರತೀಯ ಸಿಮ್ ಕಾರ್ಡ್, ಹಣ ಒದಗಿಸುತ್ತಿದ್ದ. ರಾಮ್ ಪುರ ಮತ್ತು ಉತ್ತರ ಪ್ರದೇಶದಿಂದ ಹಲವರನ್ನು ಈತ ಪಾಕಿಸ್ತಾನಕ್ಕೆ ಕಳುಹಿಸಲು ನೆರವಾಗಿದ್ದ. ಇವರ ವೀಸಾ ವ್ಯವಸ್ಥೆಯನ್ನೆಲ್ಲಾ ನೇರವಾಗಿ ಐಎಸ್ಐಯೇ ನೋಡಿಕೊಳ್ಳುತ್ತಿತ್ತು ಎಂದು ಈಗ ಬಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments