Webdunia - Bharat's app for daily news and videos

Install App

ಗಣಿತ ವಿಷಯಕ್ಕೆ ಆದ್ಯತೆ ಕೊಡು ಎಂದ ತಂದೆಯನ್ನೇ ಹತ್ಯೆಗೈದ 16ರ ವಿದ್ಯಾರ್ಥಿ

Webdunia
ಮಂಗಳವಾರ, 8 ಆಗಸ್ಟ್ 2017 (13:06 IST)
ಪುತ್ರ ಇಂಜಿನಿಯರ್ ಆಗಬೇಕೆಂದು ಬಯಸಿ ಗಣಿತ ವಿಷಯಕ್ಕೆ ಹೆಚ್ಚು ಒತ್ತು ಕೊಡು ಎಂದು ಪುತ್ರನ ಮೇಲೆ ಒತ್ತಡ ಹೇರಿರುವುದೇ ತಂದೆಯ ಹತ್ಯೆಗೆ ಕಾರಣವಾಯಿತು ಎಂದರೆ ನಂಬಲು ಸಾಧ್ಯವೇ? ನಂಬಲೇಬೇಕು ಇದು ಸತ್ಯ ಘಟನೆ.
 
ಉತ್ತರಪ್ರದೇಶದ ಪೊಲೀಸ್ ಇಲಾಖೆಯಲ್ಲಿ ಪೇದೆಯಾಗಿರುವ 45 ವರ್ಷ ವಯಸ್ಸಿನ ಮೋತಿಲಾಲ್ ಪಾಲ್, ಪುತ್ರ ಇಂಜಿನಿಯರ್ ಆಗಬೇಕು ಎಂದು ಕನಸು ಕಾಣುತ್ತಿದ್ದನು. ಅದಕ್ಕಾಗಿ 16 ವರ್ಷ ವಯಸ್ಸಿನ ಪುತ್ರನಿಗೆ ಗಣಿತ ವಿಷಯದ ಬಗ್ಗೆ ಹೆಚ್ಚಿನ ಆಸಕ್ತಿ ತೋರು ಎಂದು ಬುದ್ದಿವಾದ ಹೇಳುತ್ತಿದ್ದನು. ಆದರೆ, ಪುತ್ರ ರಾಜಾ ಪಾಲ್ ಅಲಿಯಾಸ್ ಪ್ರಿನ್ಸ್‌ಗೆ ಗಣಿತ ಎಂದರೆ ಅಲರ್ಜಿ. ಆದ್ದರಿಂದ ಹಲವಾರು ಬಾರಿ ತಂದೆಯಿಂದಲೇ ಎಟು ತಿಂದಿದ್ದನು ಎನ್ನಲಾಗಿದೆ.  
 
ತಂದೆ ಮೋತಿಲಾಲ್‌ಗೆ ಬುದ್ದಿವಾದ ಹೇಳಿದ್ದಕ್ಕಾಗಿ ಪುತ್ರನೇ ಹತ್ಯೆ ಮಾಡುತ್ತಾನೆ ಎಂದು ಕನಸಿನಲ್ಲಿಯೂ ಉಹಿಸಿರಲಿಲ್ಲ.
 
16 ವರ್ಷ ವಯಸ್ಸಿನ ಪ್ರಿನ್ಸ್, ಮನೆಯಲ್ಲಿದ್ದ ತಂದೆಯ ಗನ್ ತೆಗೆದುಕೊಂಡು ನಿದ್ರೆಯಲ್ಲಿದ್ದ ತಂದೆಯೇ ಮೇಲೆ ಗುಂಡುಹಾರಿಸಿ ಹತ್ಯೆಗೈದಿದ್ದಾನೆ. ತಂದೆಯನ್ನು ಹತ್ಯೆ ಮಾಡಿದ್ದಲ್ಲದೇ ತಾಯಿ ಮತ್ತು ಸಹೋದರಿಯನ್ನು ಗನ್‌ನಿಂದ ಬೆದರಿಸಿ ಸುಮಾರು 30 ಗಂಟೆಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದಾನೆ ಎಂದು ಪೋಷಕರು ತಿಳಿಸಿದ್ದಾರೆ.  
 
ಕಳೆದ ರವಿವಾರದಂದು ರಾತ್ರಿ ಸಂಬಂಧಿಯೊಬ್ಬರು ಹತ್ಯೆಯಾದ ಪೊಲೀಸ್ ಪೇದೆಯ ಮನೆಗೆ ಭೇಟಿ ನೀಡಿದಾಗ, ಆರೋಪಿ ಬಾಲಕ ತಾಯಿ ಸಹೋದರಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿರುವುದು ಕಂಡು ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಆರೋಪಿ ಬಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2019 ರಲ್ಲಿ ತೀರಿಕೊಂಡಿದ್ದ ಅರುಣ್ ಜೇಟ್ಲಿ 2020 ರಲ್ಲಿ ಬೆದರಿಕೆ ರಾಹುಲ್ ಗಾಂಧಿಗೆ ಬೆದರಿಕೆ ಹಾಕಿದ್ರಂತೆ

ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ, ಕಣ್ಣೀರು ಹಾಕಿದ ಅಜ್ಜ ದೇವೇಗೌಡ

ರಾಹುಲ್ ಗಾಂಧಿಯಿಂದ ಮತಗಳ್ಳತನ ಆರೋಪ: ಕಾಂಗ್ರೆಸ್ ಪ್ರತಿಭಟನೆಗೆ ಪ್ರತಿತಂತ್ರ ಹೂಡಿದ ಬಿಜೆಪಿ

ಮೊಸಳೆಕಣ್ಣೀರು ಹಾಕುತ್ತಿರುವ ರಾಹುಲ್ ಗಾಂಧಿ, ರೈತರು ಆತ್ಮಹತ್ಯೆ ಮಾಡಿಕೊಂಡಾಗ ಎಲ್ಲಿ ಇದ್ರೂ: ಪಿ.ಸಿ.ಮೋಹನ್

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

ಮುಂದಿನ ಸುದ್ದಿ
Show comments