Webdunia - Bharat's app for daily news and videos

Install App

ಉತ್ತರ ಪ್ರದೇಶದಲ್ಲಿ ಅಪ್ಪ-ಮಗ ಶಕ್ತಿ ಪ್ರದರ್ಶನ

Webdunia
ಶನಿವಾರ, 31 ಡಿಸೆಂಬರ್ 2016 (12:07 IST)
ಪಕ್ಷದಿಂದ ಉಚ್ಚಾಟಿತರಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಪಕ್ಷದೊಳಗಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಭಾರಿ ಸಂಖ್ಯೆಯ ಬೆಂಬಲಿಗರೊಂದಿಗೆ ಅವರು ಲಖನೌನಲ್ಲಿರುವ ತಮ್ಮ ನಿವಾಸದಲ್ಲಿ ಸಭೆಯನ್ನು ನಡೆಸಿದ್ದಾರೆ.
ಪಕ್ಷದ 224 ಶಾಸಕರಲ್ಲಿ 190 ಶಾಸಕರು ಮತ್ತು 30 ಎಮ್ಎಲ್‌ಸಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದು, ಬೆಂಬಲಿಗರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ. ಈ ರೀತಿ ಭಾರಿ ಬೆಂಬಲ ಪಡೆಯುವ ಮೂಲಕ ಅಖಿಲೇಶ್ ತಂದೆಗೆ ಸೆಡ್ಡು ಹೊಡೆದಿದ್ದಾರೆ. ಇದರಿಂದ ಮುಲಾಯಂ ಸಿಂಗ್ ಯಾದವ್ ಅವರಿಗೆ ಭಾರಿ ಹೊಡೆತ ಬೀಳಲಿದೆ ಎಂದು ಹೇಳಲಾಗುತ್ತಿದೆ. ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡೆಸುವ ಸಂದರ್ಭ ಬಂದರೆ ಕಾಂಗ್ರೆಸ್ ಬೆಂಬಲದೊಂದಿಗೆ ಅಖಿಲೇಶ್ ಬಹುಮತ ಸಾಬೀತು ಪಡಿಸುವುದು ನಿಶ್ಚಿತ. 
 
ಇನ್ನೊಂದೆಡೆ ಮುಲಾಯಂ ಕೂಡ ಸಂಸದೀಯ ಸಭೆ ಕರೆದಿದ್ದಾರೆ, ಆದರೆ ಈ ಸಭೆಯಲ್ಲಿ ಕೇವಲ 15 ಶಾಸಕರು ಪಾಲ್ಗೊಂಡಿದ್ದು  ಉಳಿದ 50 ಜನರು ಟಿಕೆಟ್ ಆಕಾಂಕ್ಷಿಗಳು ಎಂದು ಹೇಳಲಾಗುತ್ತಿದೆ. ತಂದೆ ವಿರುದ್ಧ ಮಗ ತೊಡೆತಟ್ಟಿ ನಿಂತಿದ್ದು ಈಗಾಗಲೇ ಮಗನನ್ನು ಪಕ್ಷದಿಂದ ಉಚ್ಚಾಟಿಸಿರುವ ಮುಲಾಯಂ ಸಿಂಗ್ ಯಾದವ್ ಅವರಿಗೆ ಮುಖಭಂಗವಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಹೀಗಾಗಿ ತಂದೆ ಬಿಗಿ ಪಟ್ಟು ಬಿಟ್ಟು ಮಗನೊಂದಿಗೆ ರಾಜಿ ಸಂಧಾನ ನಡೆಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
 
ಶಾಸಕರ ಜತೆಗಿನ ಸಭೆ ಬಳಿಕ ಅಖಿಲೇಶ್ ಪಕ್ಷದ ಸಂಘಟನಾ ಸಮಿತಿಯವರ ಜತೆ ಸಭೆ ನಡೆಸಲಿದ್ದಾರೆ.
 
ಸಭೆಯಲ್ಲಿ ಅಖಿಲೇಶ್ ಭಾವುಕರಾಗಿದ್ದು ನಾನು ತಂದೆಯಿಂದ ದೂರವಾಗಿಲ್ಲ. ಉತ್ತರ ಪ್ರದೇಶ ಚುನಾವಣೆಯನ್ನು ಗೆದ್ದು ಅಪ್ಪನಿಗೆ ಉಡುಗೊರೆ ಕೊಡುವೆ ಎಂದು ಕಣ್ಣು ತುಂಬಿಕೊಂಡು ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments