Webdunia - Bharat's app for daily news and videos

Install App

ಉತ್ತರಾಖಂಡ ಹಿಮಕುಸಿತ: ಮತ್ತೊಬ್ಬ ಕಾರ್ಮಿಕನ ಮೃತದೇಹ ಪತ್ತೆ, ಮೃತರ ಸಂಖ್ಯೆ ಐದಕ್ಕೆ ಏರಿಕೆ

Sampriya
ಭಾನುವಾರ, 2 ಮಾರ್ಚ್ 2025 (13:54 IST)
Photo Courtesy X
ಉತ್ತರಾಖಂಡ: ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯ ಮನ ಗ್ರಾಮದ ಬಳಿ ಫೆ.28 ರಂದು ಸಂಭವಿಸಿದ ಹಿಮಪಾತದಲ್ಲಿ ನಾಪತ್ತೆಯಾಗಿದ್ದ ಮತ್ತೊಬ್ಬ ವ್ಯಕ್ತಿಯ ಮೃತದೇಹವನ್ನು ಸೇನೆ ಪತ್ತೆ ಮಾಡಿದೆ.

ಇದರೊಂದಿಗೆ ಹಿಮಕುಸಿತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದ್ದು, ನಾಪತ್ತೆಯಾಗಿರುವ ಉಳಿದ ಮೂವರು ವ್ಯಕ್ತಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.  ಹಿಮಪಾತದಲ್ಲಿ ಸಿಲುಕಿದ್ದ 50 ಕಾರ್ಮಿಕರನ್ನು ಈತನಕ ರಕ್ಷಿಸಲಾಗಿದೆ.  

ನಾಪತ್ತೆಯಾದ ಉಳಿದ ಕಾರ್ಮಿಕರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸೇನೆ, ಐಟಿಬಿಪಿ, ವಾಯುಪಡೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸೇರಿದಂತೆ ಹಲವು ಪಡೆಗಳು ಕಾರ್ಯನಿರ್ವಹಿಸುತ್ತಿವೆ. ನಾಪತ್ತೆಯಾದ ಕಾರ್ಮಿಕರ ಪತ್ತೆಗೆ ನೆಲಕ್ಕೆ ನುಗ್ಗುವ ರಾಡಾರ್, ಥರ್ಮಲ್ ಇಮೇಜಿಂಗ್ ಕ್ಯಾಮೆರಾಗಳು ಮತ್ತು  ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದರು.

ಭಾರತೀಯ ವಾಯುಪಡೆಯ ಅಧಿಕಾರಿಗಳ ಪ್ರಕಾರ, ಉತ್ತರಾಖಂಡದ ಚಮೋಲಿ ಜಿಲ್ಲೆಯ ಹಿಮಕುಸಿತ ಪೀಡಿತ ಪ್ರದೇಶಗಳಲ್ಲಿ ಇಂದು ಶೋಧ ಕಾರ್ಯಾಚರಣೆಗಾಗಿ ಡ್ರೋನ್ ಆಧಾರಿತ ಇಂಟೆಲಿಜೆಂಟ್ ಬರಿಡ್ ಆಬ್ಜೆಕ್ಟ್ ಡಿಟೆಕ್ಷನ್ ಸಿಸ್ಟಮ್ ಅನ್ನು ಎಐ 47 ಅನ್ನು ಹೆಲಿಕಾಪ್ಟರ್ ಏರ್‌ಲಿಫ್ಟ್ ಮಾಡಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments