Select Your Language

Notifications

webdunia
webdunia
webdunia
webdunia

ಬಂಡಾಯ ಶಾಸಕರ ಅಮಾನತು ಎತ್ತಿ ಹಿಡಿದ ಹೈಕೋರ್ಟ್

Uttarakhand crisis
ಡೆಹ್ರಾಡೂನ್ , ಸೋಮವಾರ, 9 ಮೇ 2016 (10:56 IST)
ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದ ಉತ್ತರಾಖಂಡ್ ಶಾಸಕರಿಗೆ ಸೋಲಾಗಿದೆ. ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದ್ದ ಸ್ಪೀಕರ್ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದ್ದು ನಾಳೆ ನಡೆಯಲಿರುವ ಮತದಾನದಲ್ಲಿ ಅವರು ಪಾಲ್ಗೊಳ್ಳುವಂತಿಲ್ಲ.
 
ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಮೇ 10ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ಹರೀಶ್ ರಾವತ್ ಅವರು ವಿಶ್ವಾಸ ಮತ ಯಾಚನೆ ಮಾಡಲಿದ್ದು, ಬಂಡಾಯ ಶಾಸಕರು ಮತದಾನದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು.
 
ಈ ಮಧ್ಯೆ ತಮ್ಮನ್ನು ಅನರ್ಹಗೊಳಿಸಿದ ವಿಧಾನಸಭಾಧ್ಯಕ್ಷರ ಕ್ರಮದ ವಿರುದ್ಧ 9 ಮಂದಿ ಬಂಡಾಯ ಶಾಸಕರು ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.
 
ನೈನಿತಾಲ್ ಹೈಕೋರ್ಟ್ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸಿದ್ದು, ರಾವತ್ ಅವರಿಗೆ ಈ ತೀರ್ಪು ವರವಾಗುವ ನಿರೀಕ್ಷೆ ಇದೆ. ಅವರ ನಿವಾಸದ ಮುಂದೆ ಕೈ ಕಾರ್ಯಕರ್ತರು ಸಂಭ್ರಮವನ್ನಾಚರಿಸುತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾರ್ ಓವರ್ ಟೇಕ್ ಮಾಡಿದ್ದಕ್ಕೆ ಹತ್ಯೆ: ಬಿಜೆಪಿಯಿಂದ ಗಯಾ ಬಂದ್