Publish Date: Fri, 14 Aug 2026 (08:51 IST)
Updated Date: Fri, 14 Aug 2026 (08:57 IST)
ಡೆಹ್ರಾಡೂನ್ (ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ಏಕಾಏಕಿ ಭಾರಿ ಪ್ರಮಾಣದ ನೀರು ಮತ್ತು ಕೆಸರು ನುಗ್ಗಿದ ಪರಿಣಾಮ, ಸುರಂಗದೊಳಗೆ ಸಿಲುಕಿ 7 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಟಿಹೆಚ್ಡಿಸಿ (ತೆಹ್ರಿ ಹೈಡ್ರೊ ಡೆವಲಪ್ಮೆಂಟ್ ಕಾರ್ಪೊರೇಷನ್) ವತಿಯಿಂದ ನಡೆಯುತ್ತಿದ್ದ ಈ ಸುರಂಗ ನಿರ್ಮಾಣ ಕಾಮಗಾರಿಯ ವೇಳೆ ಹಠಾತ್ತನೆ ನೀರಿನ ಪ್ರವಾಹ ಹಾಗೂ ಮಣ್ಣಿನ ಕುಸಿತ ಉಂಟಾಗಿದೆ. ಸಂಜೆ ವೇಳೆ ನಡೆದ ಈ ಅವಘಡದ ಸಮಯದಲ್ಲಿ ಸುರಂಗದೊಳಗೆ ಸುಮಾರು 22 ಕಾರ್ಮಿಕರು ಕೆಲಸ ಮಾಡುತ್ತಿದ್ದರು. ನೀರು ಮತ್ತು ಕೆಸರಿನ ರಭಸಕ್ಕೆ ಸಿಲುಕಿ 7 ಕಾರ್ಮಿಕರು ಪ್ರಾಣ ಕಳೆದುಕೊಂಡರೆ, 14 ಜನರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಇಬ್ಬರು ಕಾರ್ಮಿಕರು ನಾಪತ್ತೆಯಾಗಿದ್ದಾರೆ.
ಘಟನೆ ನಡೆದ ತಕ್ಷಣವೇ ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆ, ರಾಜ್ಯ ವಿಪತ್ತು ಸ್ಪಂದನಾ ಪಡೆ ಮತ್ತು ಭಾರತೀಯ ಸೇನೆಯ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಸುರಂಗದಲ್ಲಿದ್ದ ಮಣ್ಣು ಹಾಗೂ ನೀರನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗುತ್ತಿದೆ.
ಸುರಂಗದೊಳಗೆ ಅವಶೇಷಗಳು ಮತ್ತು ನೀರು ನುಗ್ಗಿರುವ ಸುದ್ದಿ ತಿಳಿದ ತಕ್ಷಣವೇ ಪರಿಹಾರ ತಂಡಗಳನ್ನು ನಿಯೋಜಿಸಲಾಗಿದೆ. ಸಿಲುಕಿರುವ ಪ್ರತಿಯೊಬ್ಬರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ