Uttarkashi cloudburst: ಮೇಘಸ್ಪೋಟದಿಂದ ಉತ್ತರಕಾಶಿ ಗ್ರಾಮವಿಡೀ ಕೆಸರಿನಲ್ಲಿ ಮುಳುಗಿರುವ ವಿಡಿಯೋ

Krishnaveni K
ಬುಧವಾರ, 6 ಆಗಸ್ಟ್ 2025 (09:35 IST)
ಉತ್ತರಾಖಂಡ: ಉತ್ತರಕಾಶಿಯಲ್ಲಿ ಮೇಘಸ್ಪೋಟದಿಂದಾಗಿ ಪ್ರಳಯ ಸದೃಶ ವಾತಾವರಣ ಉಂಟಾಗಿದೆ. ಮೇಘಸ್ಪೋಟದಲ್ಲಿ 4 ಜನ ಸಾವನ್ನಪ್ಪಿದ್ದು ಖಚಿತವಾಗಿದೆ. 80 ಮಂದಿ ನಾಪತ್ತೆಯಾಗಿದ್ದಾರೆ.

ಧರಾಲಿ ಗ್ರಾಮದಲ್ಲಿ ನಿನ್ನೆ ಸಂಭವಿಸಿದ ಮೇಘಸ್ಪೋಟದಲ್ಲಿ ಸಾಕಷ್ಟು ಹಾನಿಗಳಾಗಿವೆ. ಹಲವು ಮನೆಗಳು ನೋಡ ನೋಡುತ್ತಿದ್ದಂತೇ ಪ್ರವಾಹದಲ್ಲಿ ಕೊಚ್ಚಿ ಹೋಗಿವೆ. ಇತ್ತೀಚೆಗಿನ ಮಾಹಿತಿ ಪ್ರಕಾರ 80 ಜನ ನಾಪತ್ತೆಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.

ಕೆಸರು ಸಹಿತ ಪ್ರವಾಹದಿಂದಾಗಿ ಇಡೀ ಗ್ರಾಮವೇ ಮುಳುಗಿ ಹೋಗಿದೆ. ಗ್ರಾಮದ ಕಟ್ಟಡಗಳ ಸೂರಿನವರೆಗೂ ಕೆಸರು ಸಹಿತ ನೀರು ತುಂಬಿ ನಿಂತಿದೆ. ಈ ಪ್ರವಾಹದಲ್ಲಿ ಸಿಲುಕಿದ ಗ್ರಾಮಸ್ಥರನ್ನು ರಕ್ಷಿಸಲು ಭಾರತೀಯ ಸೇನೆ, ಎನ್ ಡಿಆರ್ ಎಫ್ ಸಿಬ್ಬಂದಿ, ಐಟಿಬಿಪಿ, ಎಸ್ ಡಿಆರ್ ಎಫ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ.

ಪ್ರವಾಹದಿಂದಾಗಿ ರಕ್ಷಣಾ ಸಿಬ್ಬಂದಿಗೂ ಪರಿಹಾರ ಕಾರ್ಯ ಮಾಡಲು ತೊಂದರೆಯಾಗುತ್ತಿದೆ. ಭೂ ಕುಸಿತದಿಂದಾಗಿ ರಸ್ತೆಗಳು ಬಂದ್ ಆಗಿವೆ. ಹೀಗಾಗಿ ಪ್ರವಾಹ ಸ್ಥಳಕ್ಕೆ ತಲುಪಲು ರಕ್ಷಣಾ ಸಿಬ್ಬಂದಿಗಳಿಗೆ ಕಷ್ಟವಾಗುತ್ತಿದೆ. ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಹಾರಾಟಕ್ಕೂ ಸಮಸ್ಯೆಯಾಗಿದೆ. ಹೀಗಾಗಿ ಭಾರತೀಯ ಸೇನೆ ರಂಗಕ್ಕಿಳಿದಿದ್ದು ಈಗಾಗಲೇ 37 ಗ್ರಾಮಸ್ಥರನ್ನು ರಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಗ್ಯಾರಂಟಿ ಯೋಜನೆ ಜಾರಿ ಹಿಂದಿನ ಗುಟ್ಟು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments