Publish Date: Tue, 05 Jul 2022 (13:46 IST)
Updated Date: Tue, 05 Jul 2022 (14:47 IST)
ಲಕ್ನೋ : ಅಧಿಕಾರಕ್ಕೆ ಬಂದ 100 ದಿನದಲ್ಲಿ 68 ಸಾವಿರ ಒತ್ತುವರಿಯನ್ನು ತೆರವುಗೊಳಿಸಿ 844 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಬಿಜೆಪಿ ಸರ್ಕಾರದ 100 ದಿನದ ಸಾಧನೆಯ ವಿವರವನ್ನು ಪ್ರಕಟಿಸಿದ ಅವರು, ಬಿಜೆಪಿ ಸರ್ಕಾರ ಕುಶಾಸನ(ಕೆಟ್ಟ ಆಡಳಿತ) ತೆಗೆದು ಹಾಕಿ ಸುಶಾಸನವನ್ನು(ಉತ್ತಮ ಆಡಳಿತ) ನೀಡುತ್ತಿದ್ದೇವೆ ಎಂದು ತಿಳಿಸಿದರು.
100 ದಿನದ ಬಳಿಕ ಮುಂದೆ 6 ತಿಂಗಳು, ವರ್ಷ, 2 ವರ್ಷ, 5 ವರ್ಷದ ಟಾರ್ಗೆಟ್ ಸಿದ್ಧಪಡಿಸಿ ಕಾರ್ಯಯೋಜನೆ ಮಾಡುತ್ತೇವೆ. ನಮ್ಮ ಸರ್ಕಾರ ಭಾಷಣಗಳನ್ನು ನಂಬುವುದಿಲ್ಲ. ನಾವು ನೀಡಿದ ಭರವಸೆಗಳನ್ನು ಈಡೇರಿಸುವುದರಲ್ಲಿ ನಂಬಿಕೆ ಇಟ್ಟಿದ್ದೇವೆ ಎಂದು ಹೇಳಿದರು.