Webdunia - Bharat's app for daily news and videos

Install App

ಶಾಲಾ, ಕಾಲೇಜು ಸಿಬ್ಬಂದಿಗೆ ಲಸಿಕೆ ಕಡ್ಡಾಯಗೊಳಿಸಿದ ಸರ್ಕಾರ

Webdunia
ಗುರುವಾರ, 19 ಆಗಸ್ಟ್ 2021 (13:15 IST)
ವಾಷಿಂಗ್ಟನ್: ರಾಜ್ಯದ ಎಲ್ಲ ಶಾಲೆಗಳ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ, ಕ್ರೀಡಾ ತರಬೇತುದಾರರು ಮತ್ತು ಬಸ್ ಚಾಲಕರು, ಸ್ವಯಂ ಸೇವಕರು ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪಡೆದಿರಬೇಕು ಎಂಬ ನಿಯಮವನ್ನು ಸರ್ಕಾರ ತನ್ನ ಹೊಸ ನೀತಿಯಲ್ಲಿ ಸೇರಿಸಿದೆ ಎಂದು 'ನ್ಯೂಯಾರ್ಕ್ ಟೈಮ್ಸ್' ವರದಿ ಮಾಡಿದೆ.

ರಾಜ್ಯಪಾಲ ಜಾಯ್ ಇನ್ಸ್ಲೀ ಅವರು ಬುಧವಾರ ಪ್ರಕಟಿಸಿದ ಹೊಸ ನೀತಿಯ ಪ್ರಕಾರ, ಶಾಲೆಗಳಲ್ಲಿ ಉದ್ಯೋಗ ಮಾಡುವವರೆಲ್ಲರೂ ಕಡ್ಡಾಯ ಹಾಗೂ ಸಂಪೂರ್ಣವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಅದು ಖಾಸಗಿ, ಸರ್ಕಾರಿ ಅಥವಾ ಯಾವುದೇ ದತ್ತಿ ಶಿಕ್ಷಣ ಸಂಸ್ಥೆಯಾಗಿರಬಹುದು, ಅಲ್ಲಿ ಕೆಲಸ ಮಾಡುವ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡಿರಬೇಕು ಎಂದು ಸೂಚಿಸಲಾಗಿದೆ.
ಹೊಸ ನೀತಿಯ ಪ್ರಕಾರ ಅಕ್ಟೋಬರ್ 18ರೊಳಗೆ ಶಾಲಾ ಸಿಬ್ಬಂದಿ ಸಿಬ್ಬಂದಿ ಲಸಿಕೆ ಹಾಕಿಸಿಕೊಂಡಿರಬೇಕು. ಇಲ್ಲದಿದ್ದರೆ, ಅಂಥವರು ಸೇವೆಯಿಂದಲೇ ವಜಾಗೊಳ್ಳುವಂತಹ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ. ಈ ಮೂಲಕ ದೇಶದ ಯಾವ ರಾಜ್ಯಗಳಲ್ಲೂ ವಿಧಿಸಿದಂತಹ ಕಠಿಣ ನಿಬಂಧನೆಗಳನ್ನು ಇಲ್ಲಿ ಜಾರಿಗೆ ತರಲಾಗಿದೆ.
ಸರ್ಕಾರದ ಹೊಸ ನೀತಿ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಪಾಲ ಜಾಯ್ ಇನ್ಸ್ಲೀ, 'ಜನರ ಸುರಕ್ಷತೆಗಾಗಿ ಕೋವಿಡ್ ಪರೀಕ್ಷೆ ಮಾಡಿಸಿದರೆ ಸಾಕು ಎಂಬ ಹಂತವನ್ನು ನಾವು ಮೀರಿದ್ದೇವೆ. ಆ ಪ್ರಯತ್ನಗಳನ್ನು ಮಾಡಿ ನೋಡಿದ್ದೇವೆ. ಅದು ಪರಿಣಾಮಕಾರಿಯಲ್ಲ ಎನ್ನುವುದು ಗೊತ್ತಾಗಿದೆ' ಎಂದು ಹೇಳಿದರು.
ಇದೇ ವೇಳೆ, 'ವಾಷಿಂಗ್ಟನ್ನಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಶೇಕಡ 95 ಮಂದಿ ಲಸಿಕೆ ಹಾಕಿಸಿಕೊಂಡಿರಲಿಲ್ಲ' ಎಂಬುದನ್ನು ಅವರು ಹೇಳಿದರು.
'12 ವರ್ಷದೊಳಗಿನ ಮಕ್ಕಳು ಇನ್ನೂ ಲಸಿಕೆ ಪಡೆಯಲು ಅರ್ಹರಾಗಿಲ್ಲ' ಎಂದು ನೆನಪಿಸಿದ ಜಾಯ್, 'ನೀವು ಲಸಿಕೆ ಪಡೆಯುತ್ತೀರೆಂದರೆ, ಲಸಿಕೆ ಪಡೆಯದ ನಿಮ್ಮ ಮಗುವನ್ನು ನೀವು ರಕ್ಷಿಸುತ್ತೀರಿ' ಎಂದು ಹೇಳಿದರು.
ಕೋವಿಡ್ ಲಸಿಕೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸುವ ವಿಚಾರ ದೇಶದಾದ್ಯಂತ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ. ಸೆಂಟರ್ ಆನ್ ರೀಇನ್ವೆಂಟಿಂಗ್ ಪಬ್ಲಿಕ್ ಎಜುಕೇಷನ್ ಪ್ರಕಾರ, ದೇಶದ ಕಾಲು ಭಾಗದಷ್ಟು ರಾಜ್ಯಗಳು, ಅದರಲ್ಲೂ ರಿಪಬ್ಲಿಕನ್ಸ್ ಪಕ್ಷದ ಆಳ್ವಿಕೆಯಿರುವ ರಾಜ್ಯಗಳಲ್ಲಿ ಶಾಲಾ ಸಿಬ್ಬಂದಿ ಸೇರಿದಂತೆ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ಲಸಿಕೆಯನ್ನು ನಿಷೇಧಿಸಲಾಗಿದೆ. ಆದರೆ, ಇತ್ತೀಚೆಗಿನ ದಿನಗಳಲ್ಲಿ ಕೆಲವು ಡೆಮಾಕ್ರಟಿಕ್ ಪಕ್ಷದ ಜನಪ್ರತಿನಿಧಿಗಳು, ಅಧಿಕಾರಿಗಳು, ಕೋವಿಡ್ ಲಸಿಕೆ ಪಡೆಯಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments