Webdunia - Bharat's app for daily news and videos

Install App

ಅರ್ಥ ವ್ಯವಸ್ಥೆ ಚೇತರಿಕೆಗೆ ಲಸಿಕೆಯೇ ಮದ್ದು: ಸೀತಾರಾಮನ್

Webdunia
ಸೋಮವಾರ, 13 ಸೆಪ್ಟಂಬರ್ 2021 (08:53 IST)
ನವದೆಹಲಿ : ದೇಶದಲ್ಲಿ 73 ಕೋಟಿ ಮಂದಿಗೆ ಕೋವಿಡ್ ಲಸಿಕೆ ಹಾಕಿಸಲಾಗಿದೆ. ಇದರಿಂದಾಗಿ ದೇಶದ ಅರ್ಥ ವ್ಯವಸ್ಥೆ ಚೇತರಿಸಿಕೊಳ್ಳಲು ಕಾರಣವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.

ಟ್ಯುಟಿಕಾರಿನ್ನಲ್ಲಿ ತಮಿಳುನಾಡು ಮರ್ಕಂಟೈಲ್ ಬ್ಯಾಂಕ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶಾದ್ಯಂತ ಲಸಿಕೆ ಹಾಕುವ ಕಾರ್ಯಕ್ರಮ ನಿರಾಂತಕವಾಗಿ ನಡೆಯುತ್ತಿದೆ.
ಹೀಗಾಗಿ, ಜನರು ತಮ್ಮ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ನೆರವಾಗಿದೆ. ರೈತರು ತಮ್ಮ ಕೃಷಿ ಜಮೀನಿನಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ. ಹೀಗಾಗಿ, ಲಸಿಕೆ ಹಾಕುವುದೊಂದೇ ಅರ್ಥ ವ್ಯವಸ್ಥೆ ಚೇತರಿಸಿಕೊಳ್ಳಲು ಇರುವ ದಾರಿ ಎಂದು ವಿತ್ತ ಸಚಿವೆ ಹೇಳಿದ್ದಾರೆ.
ದೇಶದಲ್ಲಿ ಶನಿವಾರದಿಂದ ಭಾನುವಾರದ ಅವಧಿಯಲ್ಲಿ 28,591 ಹೊಸ ಸೋಂಕು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 338 ಮಂದಿ ಅಸುನೀಗಿದ್ದಾರೆ. ಮತ್ತೂಂದು ಧನಾತ್ಮಕ ಬೆಳವಣಿಗೆಯಲ್ಲಿ ಸಕ್ರಿಯ ಸೋಂಕು ಸಂಖ್ಯೆ 6,600 ಇಳಿಕೆಯಾಗಿದ್ದರಿಂದ 3,32,36,921ಕ್ಕೆ ತಲುಪಿದೆ. ಚೇತರಿಕೆ ಪ್ರಮಾಣ ಶೇ.97.51 ಆಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಪ್ರಕರಣಗಳ ಪೈಕಿ ಕೇರಳ ಪಾಲು ಶೇ.70 ಆಗಿದೆ. ಇನ್ನೊಂದೆಡೆ, ಕೇರಳದಲ್ಲಿ ಭಾನುವಾರ ಒಂದೇ ದಿನ 20,240 ಹೊಸ ಕೇಸುಗಳು ಪತ್ತೆಯಾಗಿವೆ. 67 ಮಂದಿ ಅಸುನೀಗಿದ್ದಾರೆ. ಇದೇ ವೇಳೆ ತಮಿಳುನಾಡಿನಲ್ಲಿ ಭಾನುವಾರ ಒಂದೇ ದಿನ 22.6 ಲಕ್ಷ ಮಂದಿಗೆ ಲಸಿಕೆ ನೀಡಲಾಗಿದೆ. ರಾಜಧಾನಿ ಚೆನ್ನೈನಲ್ಲಿ 1.11 ಲಕ್ಷ ಡೋಸ್ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments