ಬಿಎಸ್ಎನ್ಎಲ್ ಉದ್ಯೋಗಿಗಳಿಗೆ ವೈಷ್ಣವ್ ವಾರ್ನಿಂಗ್?

Webdunia
ಭಾನುವಾರ, 7 ಆಗಸ್ಟ್ 2022 (12:42 IST)
ನವದೆಹಲಿ : ಕೇಂದ್ರ ಸರ್ಕಾರ ಸಹಕಾರ ನೀಡುತ್ತಿದ್ದರೂ ಮುಂದಿನ 24 ತಿಂಗಳಿನಲ್ಲಿ ಸರಿಯಾಗಿ ಕೆಲಸ ಮಾಡದೇ ಇದ್ದರೆ ಬಿಎಸ್ಎನ್ಎಲ್ ಉದ್ಯೋಗಿಗಳು ಸ್ವಯಂ ನಿವೃತ್ತಿ ತೆಗೆದುಕೊಂಡು ಮನೆಗೆ ಹೋಗುತ್ತಾರೆ ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಎಚ್ಚರಿಕೆ ನೀಡಿದ್ದಾರೆ.
 
ಮುಖ್ಯ ಜನರಲ್ ಮ್ಯಾನೇಜರ್ಗಳೊಂದಿಗಿನ ಸಭೆಯಲ್ಲಿ ವೈಷ್ಣವ್, ಸರ್ಕಾರ ಬಿಎಸ್ಎನ್ಎಲ್ ಹಿಂದೆ ಬಂಡೆಯಾಗಿ ನಿಂತಿದ್ದು, ಕೆಲಸ ಮಾಡುತ್ತಿರುವ 62 ಸಾವಿರ ಉದ್ಯೋಗಿಗಳಿಂದ ಅದೇ ಮಟ್ಟದ ಬದ್ಧತೆಯನ್ನು ನಿರೀಕ್ಷಿಸುತ್ತಿದೆ.

ನಾನು ಪ್ರತಿ ತಿಂಗಳು ಕಾರ್ಯಕ್ಷಮತೆಯ ಫಲಿತಾಂಶವನ್ನು ಪರಿಶೀಲಿಸುತ್ತೇನೆ. ಕೆಲಸ ಮಾಡದಿರುವವರು ವಿಆರ್ಎಸ್ ತೆಗೆದುಕೊಂಡು ಮನೆಗೆ ಹೋಗಬಹುದು ಎಂದು ಖಡಕ್ ಆಗಿಯೇ ಹೇಳಿದ್ದಾರೆ.

ಸಭೆಯಲ್ಲಿ ಉದ್ಯೋಗಿಗಳಿಗೆ perform or perish ಆಯ್ಕೆ ನೀಡಿದ ಸಚಿವರು, ವಿಆರ್ಎಸ್ ತೆಗೆದುಕೊಳ್ಳಲು ಹಿಂಜರಿಯುವವರಿಗೆ 56(ಜೆ) ನಿಯಮ ಪ್ರಯೋಗಿಸಿ ಕಡ್ಡಾಯ ನಿವೃತ್ತಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಕಳಪೆ ಕಾರ್ಯಕ್ಷಮತೆಯ ಆಧಾರದ ಮೇಲೆ ಭಾರತೀಯ ರೈಲ್ವೆಯ ಸುಮಾರು 70 ಅಧಿಕಾರಿಗಳಿಗೆ ಕೆಲಸ ತೊರೆಯುವಂತೆ ಸೂಚಿಸಲಾಗಿದೆ ಎಂದು ಉಲ್ಲೇಖಿಸಿದರು. ಬಿಎಸ್ಎನ್ಎಲ್ಗೆ 1.64 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ ಬೆನ್ನಲ್ಲೇ ಕೇಂದ್ರ ಈಗ ಉದ್ಯೋಗಿಗಳಿಗೆ ಖಡಕ್ ಸಂದೇಶವನ್ನು ರವಾನಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments