Select Your Language

Notifications

webdunia
webdunia
webdunia
webdunia

ಮಾಜಿ ಪ್ರಧಾನಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ

ಮಾಜಿ ಪ್ರಧಾನಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಪ್ರದಾನ
ನವದೆಹಲಿ , ಶುಕ್ರವಾರ, 27 ಮಾರ್ಚ್ 2015 (11:03 IST)
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗಿರುವ ಭಾರತ ರತ್ನ ಪ್ರಶಸ್ತಿಯನ್ನು  ಪ್ರದಾನ ಮಾಡಲಾಯಿತು.
 
ವಾಜಪೇಯಿ ಅವರ ನಿವಾಸದಲ್ಲಿ ನಡೆಯಲಿರುವ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಂದೀಪ್ ದೀಕ್ಷಿತ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.
 
ಇನ್ನು ಸರ್ಕಾರ ಈ ಹಿಂದೆ ವಾಜಪೇಯಿ ಅವರ ಜೊತೆಗೆ ಪಂಡಿತ್ ಮದನ್ ಮೋಹನ್ ಮಾಳವಿಯಾ ಅವರಿಗೂ ಪ್ರಶಸ್ತಿಯನ್ನು ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಮಾಳವೀಯ ಅವರಿಗೆ ಮರಣೋತ್ತರವಾಗಿ ಪ್ರಧಾನ ಮಾಡುತ್ತಿದ್ದು, ಮಾರ್ಚ್ 30ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನ ಮಾಡಲಾಗುತ್ತದೆ ಎನ್ನಲಾಗಿದೆ. 

Share this Story:

Follow Webdunia kannada