Webdunia - Bharat's app for daily news and videos

Install App

ರೈಲ್ವೆ ಕ್ರಾಸಿಂಗ್‌ನಲ್ಲಿ ವ್ಯಾನ್- ರೈಲು ಭೀಕರ ಅಪಘಾತ: 12 ಸಾವು

Webdunia
ಸೋಮವಾರ, 26 ಜನವರಿ 2015 (16:47 IST)
ವ್ಯಾನ್​'ವೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಾನ್​'ನಲ್ಲಿದ್ದ 12 ಮಂದಿ ಮೃತಪಟ್ಟಿರುವ ದಾರುಣ ಘಟನೆ ಹರಿಯಾಣದಲ್ಲಿ ಸಂಭವಿಸಿದೆ. 
 
ಸರಸೋದ್ ಗ್ರಾಮದ ಬಳಿ ಮಾನವರಹಿತ ರೈಲ್ವೆ ಕ್ರಾಸಿಂಗ್'ನಲ್ಲಿ ನಡೆದ ಈ ದುರಂತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ.

ಸಿಗ್ನಲ್ ರಹಿತ ರೈಲ್ವೆ ಹಳಿ ದಾಟುತ್ತಿದ್ದಾಗ ವ್ಯಾನ್'​ಗೆ ರೈಲು ಡಿಕ್ಕಿ ಹೊಡೆದಿದೆ. ಮುಂಜಾವಿನಲ್ಲಿ ಮಂಜು ದಟ್ಟವಾಗಿದ್ದರಿಂದ ರೈಲು ಬರುವುದು ಕಂಡಿಲ್ಲ. ಹೀಗಾಗಿ ಅಪಘಾತ ಘಟಿಸಿದೆ.
 
ಅಪಘಾತಕ್ಕೀಡಾದ ಟಾಟಾ ಮ್ಯಾಜಿಕ್ ವಾಹನದಲ್ಲಿ ಒಂದೇ ಕುಟುಂಬದ 15 ಮಂದಿ ಪ್ರಯಾಣ ಬೆಳೆಸುತ್ತಿದ್ದರೆನ್ನಲಾಗಿದೆ.

ಬಲಕ್ ಎಂಬ ಗ್ರಾಮದವರಾದ ಇವರು ಯಾವುದೋ ಧಾರ್ಮಿಕ ಕಾರ್ಯಕ್ರಮಕ್ಕಾಗಿ ಹೊರಟಿದ್ದರು. ಗಾಯಗೊಂಡಿರುವ ಮೂವರನ್ನ ಹಿಸಾರ್ ಬಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments