Webdunia - Bharat's app for daily news and videos

Install App

Varanasi Horror: ಯುವತಿಯೊಬ್ಬಳನ್ನು 7 ದಿನ ಕಟ್ಟಿಹಾಕಿ 23 ಮಂದಿಯಿಂದ ಗ್ಯಾಂಗ್‌ ರೇಪ್‌

Sampriya
ಸೋಮವಾರ, 7 ಏಪ್ರಿಲ್ 2025 (21:28 IST)
ವಾರಣಾಸಿ: ಯುವತಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಿ 7 ದಿನಗಳಲ್ಲಿ ಆಕೆಯ ಮೇಲೆ 23 ಪುರುಷರು ನಿರಂತರ ಅತ್ಯಾಚಾರ ಎಸಗಿರುವ ಬೆಚ್ಚಿಬೀಳಿಸುವ ಘಟನೆ ಪಾಂಡೆಪುರ ಲಾಲ್ಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿ ನೀಡಿದ ದೂರಿನ ಆನುಸಾರ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ.

ಏಪ್ರಿಲ್ 4ರಂದು ಮನೆಗೆ ವಾಪಾಸ್ಸಾದ ಯುವತಿ ತನ್ನ ಕುಟುಂಬಕ್ಕೆ ಘಟನೆಯ ಬಗ್ಗೆ ತಿಳಿಸಿದ್ದು, ನಂತರ ಅವರು ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಪಾಂಡೆಪುರ ಲಾಲ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿರುವ ಮಹಿಳೆ ಮಾರ್ಚ್ 29 ರಂದು ನಾಪತ್ತೆಯಾಗಿದ್ದಾರೆ.ನನ್ನನ್ನು ಕಿಡ್ನ್ಯಾಪ್ ಮಾಡಿ 7ದಿನದಲ್ಲಿ 23ಮಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದ್ದಾರೆ.

ಡಿಸಿಪಿ ವರುಣಾ ವಲಯ, ಚಂದ್ರಕಾಂತ್ ಮಿನಾ ಅವರು, ಸಂತ್ರಸ್ತೆಯ ದೂರಿನ ಮೇರೆಗೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಎಲ್ಲಾ ಆರೋಪಿಗಳ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 70(1) (ಸಾಮೂಹಿಕ ಅತ್ಯಾಚಾರ), 74 (ಮಾನಸಿಕ ದೌರ್ಜನ್ಯ), 123 (ವಿಷ ಅಥವಾ ಹಾನಿಕಾರಕ ವಸ್ತು ನೀಡುವುದು), 126(2) (ಚಲನೆಗೆ ಅಡ್ಡಿಪಡಿಸುವುದು), 127(2) (ಅಕ್ರಮ ಬಂಧನ), ಮತ್ತು 351(2) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ಪ್ರಾಥಮಿಕ ತನಿಖೆಯ ನಂತರ, ಆರು ಆರೋಪಿಗಳನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ಕಾನೂನು ಔಪಚಾರಿಕತೆಗಳು ನಡೆಯುತ್ತಿವೆ ಎಂದು ಎಸಿಪಿ ಕ್ಯಾಂಟ್, ವಿದುಷ್ ಸಕ್ಸೇನಾ ಹೇಳಿದ್ದಾರೆ. ಇತರ ಆರೋಪಿಗಳನ್ನು ಬಂಧಿಸುವಲ್ಲಿ ಹೆಚ್ಚಿನ ತಂಡಗಳು ತೊಡಗಿವೆ.

ಮಾರ್ಚ್ 29 ರಂದು ತನ್ನ ಮಗಳು ಸ್ನೇಹಿತನ ಮನೆಗೆ ಹೋಗಿದ್ದಳು ಎಂದು ಹುಡುಗಿಯ ತಾಯಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹಿಂತಿರುಗುವಾಗ, ಆರೋಪಿಗಳಲ್ಲಿ ಒಬ್ಬನನ್ನು ಭೇಟಿಯಾದಳು, ಅವನು ಅವಳನ್ನು ಲಂಕಾದಲ್ಲಿರುವ ತನ್ನ ಕೆಫೆಗೆ ಕರೆದೊಯ್ದು ರಾತ್ರಿಯಿಡೀ ಆಕೆಯ ಮೇಲೆ  ಅತ್ಯಾಚಾರ ಮಾಡಿದನು.

ಮಾರ್ಚ್ 30 ರಂದು, ಅವಳು ರಸ್ತೆಯಲ್ಲಿ ಇನ್ನೊಬ್ಬ ಆರೋಪಿ ಮತ್ತು ಅವನ ಸ್ನೇಹಿತನನ್ನು ಭೇಟಿಯಾದಳು. ಅವರು ಅವಳನ್ನು ತಮ್ಮ ಮೋಟಾರ್‌ಸೈಕಲ್‌ನಲ್ಲಿ ಹೆದ್ದಾರಿಯ ಕಡೆಗೆ ಕರೆದೊಯ್ದು ಅತ್ಯಾಚಾರ ಮಾಡಿ ನಾಡೇಸರ್‌ನಲ್ಲಿ ಬಿಟ್ಟು ಹೋದರು ಎಂದು ದೂರಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ