2009ರ ಚುನಾವಣೆ ಪ್ರಚಾರಾದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಸಂಸದ ವರುಣ್ ಗಾಂಧಿಗೆ ಜಿಲ್ಲಾ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.
ಸ್ಥಳೀಯ ನ್ಯಾಯಾಲಯ ದ್ವೇಷ ಭಾಷಣ ಮಾಡಿದ್ದ ವರುಣ್ ಗಾಂಧಿಯವರನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಸಾದ್ ಹಯಾತ್, ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕಳೆದ 2013ರಲ್ಲಿ ಸ್ಥಳೀಯ ನ್ಯಾಯಾಲಯ ದ್ವೇಷಭಾಷಣ ಕುರಿತಂತೆ ವರುಣ್ ಗಾಂಧಿ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ಬಿಡುಗಡೆಗೊಳಿಸಿತ್ತು.
2009ರಲ್ಲಿ ಫಿಲಿಬಿಟ್ ಲೋಕಸಭೆ ಕ್ಷೇತ್ರದ ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ದ್ವೇಷ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಅಂದಿನ ಸಿಎಂ ಮಾಯಾವತಿ ಸರಕಾರ ವರುಣ್ ವಿರುದ್ಧ ಕೇಸ್ ದಾಖಲಿಸಿತ್ತು.
ವರುಣ್ ಗಾಂಧಿಯವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿತ್ತು. ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನಿರಪರಾಧಿಯಾಗಿ ಹೊರಹೊಮ್ಮಿದ್ದರು.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.