ವರುಣ್ ಗಾಂಧಿಯಲ್ಲಿ ನೆಹರು ಸಿದ್ಧಾಂತಗಳಿವೆ, ಬಿಜೆಪಿಗೆ ಅನರ್ಹ: ದಿಗ್ವಿಜಯ್ ಸಿಂಗ್

Webdunia
ಬುಧವಾರ, 27 ಸೆಪ್ಟಂಬರ್ 2017 (18:39 IST)
ರೋಹಿಂಗ್ಯ ಮುಸ್ಲಿಮರ ಬಗ್ಗೆ ನಿಲುವು ವ್ಯಕ್ತಪಡಿಸಿದ ಬಿಜೆಪಿ ಮುಖಂಡ ಸಂಸದ ವರುಣ್ ಗಾಂಧಿಯನ್ನು ಬೆಂಬಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಸ್ಲಿಮರನ್ನು ಬೆಂಬಲಿಸುವ ಮೂಲಕ ವರುಣ್ ಗಾಂಧಿ ನೆಹರೂ-ಗಾಂಧಿ ಪರಂಪರೆ ಮತ್ತು ಕಲ್ಪನೆಯನ್ನು ಹೊಂದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ವರುಣ್ ಬಿಜೆಪಿಯಲ್ಲಿರಲು ಅನರ್ಹರು ಎಂದು ಟ್ವೀಟ್ ಮಾಡಿದ್ದಾರೆ.
 
ವರುಣ್ ಗಾಂಧಿ ರೋಹಿಂಗ್ಯ ಮುಸ್ಲಿಮರ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಇವೆಲ್ಲಾ ಉಹಾಪೋಹದ ವರದಿಗಳು ಎಂದು ಬಿಜೆಪಿ ವಿವಾದವನ್ನು ತಣ್ಣಗಾಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. 
 
ಮಂಗಳವಾರ, ಭಾರತದಲ್ಲಿ ವಾಸಿಸುತ್ತಿರುವ ರೋಹಿಂಗ್ಯಾ ಮುಸ್ಲಿಂ ನಿರಾಶ್ರಿತರಿಗೆ ಆಶ್ರಯವನ್ನು ಒದಗಿಸಿ ಅವರ ದೇಶಕ್ಕೆ  ಗಡೀಪಾರು ಮಾಡುವುದು ಸರಿಯಲ್ಲ. ಭಾರತದ ಶ್ರೀಮಂತ ಇತಿಹಾಸದಲ್ಲಿ ಅನೇಕ ನಿರಾಶ್ರಿತರಿಗೆ ಆಶ್ರಯ ನೀಡಿದ ಘಟನೆಗಳಿವೆ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
 
ವರುಣ್ ಗಾಂಧಿ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿದ ಗೃಹ ಸಚಿವಾಲಯದ ರಾಜ್ಯ ಸಚಿವ ಹಂಸರಾಜ್ ಆಹಿರ್, ರಾಷ್ಟ್ರದ ಹಿತಾಸಕ್ತಿಗೆ ಮೊದಲು ಆದ್ಯತೆ ನೀಡಬೇಕು ಎಂದು ವರುಣ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.  
 
ಹಿಂಸಾಚಾರದ ಹಿನ್ನೆಲೆಯಲ್ಲಿ ಮಯನ್ಮಾರ್‌ನಿಂದ ಪಲಾಯನ ಮಾಡಿದ ಬಳಿಕ ಸುಮಾರು 40,000 ರೋಹಿಂಗ್ಯಾ ಮುಸ್ಲಿಮರು ಭಾರತದಲ್ಲಿ ವಾಸಿಸುತ್ತಿದ್ದಾರೆ. ಸೆಪ್ಟಂಬರ್ 21 ರಂದು ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್, ರೋಹಿಂಗ್ಯೆ ಮುಸ್ಲಿಮರು 'ಕಾನೂನುಬಾಹಿರ ವಲಸಿಗರು. ದೇಶದಲ್ಲಿ ಆಶ್ರಯ ಪಡೆದುಕೊಂಡ ನಿರಾಶ್ರಿತರಂತೆ ಅರ್ಹತೆ ಹೊಂದಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments