Webdunia - Bharat's app for daily news and videos

Install App

ಜಮ್ಮುವಿನಲ್ಲಿ ಮುಂದುವರಿದ ವರುಣನ ಆರ್ಭಟ: ಮಳೆಗೆ ಬಂಡೆ ಉರುಳಿ ಇಬ್ಬರು ಸಾವು

Sampriya
ಶುಕ್ರವಾರ, 28 ಫೆಬ್ರವರಿ 2025 (13:41 IST)
Photo Courtesy X
ಜಮ್ಮು: ಜಮ್ಮುವಿದಾದ್ಯಂತ ವರುಣನ ಆರ್ಭಟ ಮುಂದುವರಿದಿದೆ. ಕಾಶ್ಮೀರ ಕಣಿವೆಯ ಮೇಲ್ಭಾಗ ಮತ್ತು ಜಮ್ಮು ಪ್ರದೇಶದಲ್ಲಿ ಹಿಮಪಾತವೂ ಕಂಡುಬಂದಿದೆ.

ಭಾರೀ ಮಳೆ ಮತ್ತು ಹಿಮ ಬೀಳುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದ ಕಾರಣ  ಶುಕ್ರವಾರ ಇಡೀ ಜಮ್ಮು ಮತ್ತು ಕಾಶ್ಮೀರದಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮೂರನೇ ದಿನವೂ ಜಮ್ಮುವಿನ ಹಲವೆಡೆ ನಿರಂತರ ಮಳೆ ಸುರಿಯುತ್ತಿದೆ. ಮಳೆ ಸಂಬಂಧಿತ ಅವಘಡದಲ್ಲಿ ಮಹಿಳೆ ಮತ್ತು ಆಕೆಯ ಮಗ ಸಾವಿಗೀಡಾಗಿದ್ದಾರೆ. ಉಕ್ಕಿ ಹರಿಯುತ್ತಿರುವ ಜಲಮೂಲಗಳಿಂದ 12 ಜನರನ್ನು ರಕ್ಷಿಸಲಾಗಿದೆ.

ಉಧಂಪುರ ಜಿಲ್ಲೆಯ ಮೌಂಗಾರಿ ಬಳಿ ಗುಡ್ಡದಿಂದ ಬಂಡೆಯೊಂದು ಉರುಳಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಶಾನೋ ದೇವಿ (50) ಮತ್ತು ಅವರ ಮಗ ರಘು (25) ಮೃತಪಟ್ಟಿದ್ದಾರೆ.

ರಾಜ್‌ಬಾಗ್ ಪ್ರದೇಶದ ಉಜ್ ನದಿಯಲ್ಲಿ ಸಿಲುಕಿದ್ದ ಕನಿಷ್ಠ 11 ವಲಸೆ ಕಾರ್ಮಿಕರನ್ನು ಪೊಲೀಸ್ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಜಂಟಿ ತಂಡ ರಕ್ಷಿಸಿದೆ.

ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುತ್ತಿದ್ದು, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ರಸ್ತೆಗಳ ಸಂಚಾರ ಬಂದ್ ಆಗಿದೆ. ನೂರಾರು ವಾಹನಗಳು ರಸ್ತೆಯಲ್ಲಿ ಸಿಲುಕಿಕೊಂಡಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments