Webdunia - Bharat's app for daily news and videos

Install App

ಕಾಂಗ್ರೆಸ್ ವಿರುದ್ಧವೇ ಸಿಡಿದೆದ್ದ ವೀರಪ್ಪ ಮೊಯಿಲಿ!

Webdunia
ಬುಧವಾರ, 12 ಏಪ್ರಿಲ್ 2017 (10:11 IST)
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಪಕ್ಷದ ನಾಯಕರೇ ಕಿಡಿಕಾರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದೀಗ ಆ ಸಾಲಿಗೆ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯಿಲಿ ಸೇರ್ಪಡೆಗೊಂಡಿದ್ದಾರೆ.

 

ಇಲೆಕ್ಟ್ರಾನಿಕ್ ಮತಯಂತ್ರದ ಬಳಕೆ ನಿಲ್ಲಿಸಬೇಕೆಂದು, ಆಮ್ ಆದ್ಮಿ ಪಕ್ಷ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಒತ್ತಾಯಿಸುತ್ತಿವೆ. ಇದಕ್ಕೆ ಕಾಂಗ್ರೆಸ್ ಕೂಡಾ ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಮೊಯಿಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
‘ನಾನು ಕಾನೂನು ಸಚಿವನಾಗಿದ್ದಾಗಲೇ ಮತಯಂತ್ರಗಳನ್ನು ಜಾರಿಗೆ ತರಲಾಯಿತು. ಆರಂಭದಲ್ಲಿ ಹಲವು ನ್ಯೂನ್ಯತೆಗಳಿದ್ದವು. ಆದರೆ ಅದನ್ನೆಲ್ಲಾ ಸರಿಪಡಿಸಲಾಯಿತು. ಆಮೇಲೆ ನಿಮಗೇ ಗೊತ್ತು. ಇವಿಎಂ ಯಂತ್ರಗಳು ಜನಪ್ರಿಯವಾದವು. ಅದರ ಬಳಕೆ ವಿರೋಧಿಸುವುದು ಸರಿಯಲ್ಲ’ ಎಂದಿದ್ದಾರೆ.

 
ಕಾಂಗ್ರೆಸ್ ಸೇರಿದಂತೆ 13 ರಾಷ್ಟ್ರೀಯ ಪಕ್ಷಗಳು, ಚುನಾವಣಾ ಆಯೋಗಕ್ಕೆ ಮತಯಂತ್ರ ಬಳಕೆ ನಿಲ್ಲಿಸುವಂತೆ ಮನವಿ ಮಾಡಿವೆ. ಈ ವಿಚಾರದಲ್ಲಿ ನನ್ನನ್ನೂ ಸೇರಿದಂತೆ ಹಲವರ ಅಭಿಪ್ರಾಯ ಕೇಳಲಿಲ್ಲ ಎಂದು ಮೊಯಿಲಿ ಆರೋಪಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments