ರಾಹುಲ್ ಪ್ರಜಾಪ್ರಭುತ್ವದ ವ್ಯಾಖ್ಯಾನ ಭೂತದ ಬಾಯಲ್ಲಿ ಭಗವದ್ಗೀತೆಯಂತೆ

Webdunia
ಮಂಗಳವಾರ, 8 ನವೆಂಬರ್ 2016 (16:09 IST)
ಎನ್‌ಡಿ ಟಿವಿ ಬ್ಯಾನ್‌ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಕಿಡಿಕಾರುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ವೆಂಕಯ್ಯ ನಾಯ್ಡು ಕಟುವಾಗಿ ಹರಿಹಾಯಿದ್ದಾರೆ. 
 
ರಾಹುಲ್ ಬಾಯಲ್ಲಿ ಪ್ರಜಾಪ್ರಭುತ್ವ ಮತ್ತು ಮೂಲಭೂತ ಹಕ್ಕುಗಳ ವ್ಯಾಖ್ಯಾನ ಕೇಳುತ್ತಿದರೆ ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗುತ್ತದೆ ಎಂದು ಅವರು ಹೇಳಿದ್ದಾರೆ. 
 
ರಾಹುಲ್ ಮಾತನಾಡುವ ಪ್ರತಿ ಶಬ್ಧ ಅವರಿಗೆ ತಕ್ಕುದಾಗಿದೆ. ಅವರೇನು ಮಾಡಿದ್ದರು ಎಂಬುದನ್ನು ದೇಶಕ್ಕೆ ನೆನಪು ಮಾಡಿಕೊಡುತ್ತದೆ. ಆದರೆ ಅದು ಅವರಿಗೆ ಬಹುಶಃ ಗೊತ್ತಿರಲಿಕ್ಕಿಲ್ಲ. ರಾಹುಲ್ ಮಾತು ಜನರಿಗೆ 1975ರಲ್ಲಿ ಕಾಂಗ್ರೆಸ್ ಸರ್ಕಾರ ಹೇರಿದ್ದ ತುರ್ತುಪರಿಸ್ಥಿತಿ ದಿನಗಳನ್ನು ನೆನಪಿಗೆ ತರುತ್ತದೆ. ಕಾಂಗ್ರೆಸ್ ಲೋಕತಂತ್ರ ಮತ್ತು ಮೂಲಭೂತ ಹಕ್ಕುಗಳ ಕುರಿತು ಮಾತನ್ನಾಡುತ್ತಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ ಎಂದಿದ್ದಾರೆ. 
 
ಖಾಸಗಿ ಸುದ್ದಿವಾಹಿನಿ ಮೇಲೆ ಒಂದು ದಿನದ ನಿಷೇಧ ಹೇರಿದ್ದಕ್ಕೆ ರಾಹುಲ್ ಪ್ರಜಾಪ್ರಭುತ್ವದ ಅವನತಿ ಎನ್ನುತ್ತಾರೆ. ಮೂಲಭೂತ ಹಕ್ಕಿನ ಮಾತನ್ನಾಡುತ್ತಾರೆ. ಆದರೆ ಯುಪಿಎ ಸರ್ಕಾರದ ಅವಧಿಯಲ್ಲಿ 21 ವಾಹಿನಿಗಳ ಬ್ಯಾನ್ ಹೇರಿದ್ದು ಅವರಿಗೆ ಮರೆತು ಹೋಗಿದೆಯೇ? ಎಂದು ನಾಯ್ಡು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments