Select Your Language

Notifications

webdunia
webdunia
webdunia
webdunia

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

ಆರ್‌ಸಿಬಿ ವಿಜಯೋತ್ಸವ ಮೆರವಣಿಗೆ ದುರಂತ

Sampriya

ಬೆಂಗಳೂರು , ಮಂಗಳವಾರ, 10 ಜೂನ್ 2025 (20:06 IST)
Photo Courtesy X
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ 11 ಮಂದಿ ಸಾವನ್ನಪ್ಪಿದ್ದು ಕಾಲ್ತುಳಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರೂ, ನ್ಯಾಯಾಂಗ ತನಿಖೆಯ ಸಮಯದಲ್ಲಿ ಪಕ್ಷದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಗೆ ತಿಳಿಸಿದೆ.

ಎಐಸಿಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಇಂದು ನವದೆಹಲಿಯಲ್ಲಿ ಮಾಧ್ಯಮಗಳ ಮುಂದೆ ಈ ಸಂಬಂಧ ಪ್ರತಿಕ್ರಿಯಿಸಿದರು. 

ಇದಕ್ಕೂ ಮುನ್ನಾ ಬೆಂಗಳೂರು ಕಾಲ್ತುಳಿತ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಶಿವಕುಮಾರ್ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಷ್ಟ್ರೀಯ ನಾಯಕತ್ವವನ್ನು ಭೇಟಿ ಮಾಡಿ ವಿವರಿಸಿದರು. 

ಈ ಭೇಟಿ ವೇಳೆ ಬೆಂಗಳೂರಿನಲ್ಲಿ ನಡೆದ ದುರದೃಷ್ಟಕರ ಮತ್ತು ದುರಂತ ಕಾಲ್ತುಳಿತ ಘಟನೆ ಸೇರಿದಂತೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಬಗ್ಗೆ ವಿವರಿಸಿದರು. 

ಮುಖ್ಯಮಂತ್ರಿ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ (ಪಿಸಿಸಿ) ಅಧ್ಯಕ್ಷರು ಘಟನೆಯ ಬಗ್ಗೆ ಮತ್ತು ಘಟನೆಯ ನಂತರ ಕರ್ನಾಟಕ ಸರ್ಕಾರ ತೆಗೆದುಕೊಂಡ ಕ್ರಮದ ಬಗ್ಗೆ ಹೈಕಮಾಂಡ್ ಗೆ ವಿವರಿಸಿದರು ಎಂದು ವೇಣುಗೋಪಾಲ್ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ