Webdunia - Bharat's app for daily news and videos

Install App

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ: ಪ್ರಧಾನಿ ಮೋದಿ ಮೌನ ಮುರಿಯಲಿ ಎಂದ ವಿಎಚ್‌ಪಿ

Webdunia
ಬುಧವಾರ, 10 ಫೆಬ್ರವರಿ 2016 (19:12 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಮೌನ ಮುರಿದು ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಿಸಲು ತಮ್ಮ ಸರಕಾರ ಬದ್ಧವಾಗಿದೆ ಎನ್ನುವ ಸ್ಪಷ್ಟ ಸಂದೇಶ ರವಾನಿಸಲಿ ಎಂದು ವಿಶ್ವ ಹಿಂದು ಪರಿಷತ್ ಒತ್ತಾಯಿಸಿದೆ. 
 
ಪ್ರಧಾನಿ ಮೋದಿ ರಾಮಜನ್ಮಭೂಮಿಯಲ್ಲಿ ಸೆಲ್ಫಿ ತೆಗೆದುಕೊಂಡು ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರ ರಾಮಮಂದಿರ ನಿರ್ಮಾಣಕ್ಕೆ ಬದ್ಧವಾಗಿದೆ ವಎನ್ನುವ ಸಂದೇಶ ಸಾರಲಿ ಎಂದು ವಿಶ್ವ ಹಿಂದು ಪರಿಷತ್‌ನ ಕೇಂದ್ರೀಯ ಮಾರ್ಗದರ್ಶಕ ಮಂಡಲ್‌ ಕೋರಿದೆ. 
 
ದೇಶಾದ್ಯಂತ ಗೋ ಹತ್ಯೆಯಂತಹ ಘಟನೆಗಳಲ್ಲಿ ಹೆಚ್ಚಳವಾಗುತ್ತಿರುವುದು ಕಳವಳಕಾರಿಯಾಗಿದೆ. ಬಿಜೆಪಿ ಅಧಿಕಾರವಿರುವ ರಾಜ್ಯಗಳಾದ ಗುಜರಾತ್ ಮತ್ತು ಹರಿಯಾಣಾ ರಾಜ್ಯಗಳಲ್ಲಿರುವಂತೆ ಗುರು ಸೇವಾ ಆಯೋಗ ರಚಿಸಬೇಕು ಎಂದು ವಿಎಚ್‌ಪಿ ಮುಖಂಡರು ಮತ್ತು ಹಿಂದೂ ಧಾರ್ಮಿಕ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.
 
ಹಿಂದು ಸಮುದಾಯದ ಬೆಂಬಲ ಪಡೆದಿರುವ ಪ್ರಧಾನಿ ಮೋದಿ ಅಯೋಧ್ಯೆ ವಿಷಯದ ಬಗ್ಗೆ ಮೌನ ಮುರಿದು ಹೇಳಿಕೆ ನೀಡುವುದು ಅಗತ್ಯವಾಗಿದೆ ಎಂದು ವಿಎಚ್‌ಪಿ ಮುಖಂಡ ರಾಮ್ ವಿಲಾಸ್ ವೇದಾಂತಿ ಹೇಳಿದ್ದಾರೆ.
 
ವಿದೇಶಗಳಿಗೆ ಭೇಟಿ ನೀಡಿದ ಮೋದಿ ಹಲವು ಧರ್ಮಗಳಿಗೆ ಸೇರಿದ ಪವಿತ್ರ ಸ್ಥಳಗಳಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾರೆ. ಅದರಂತೆ, ಅಯೋಧ್ಯೆಯಲ್ಲೂ ಮೋದಿ ಸೆಲ್ಫಿ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments