Webdunia - Bharat's app for daily news and videos

Install App

ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಉಪರಾಷ್ಟ್ರಪತಿ ಜಗದೀಪ್ ಆರೋಗ್ಯ ಹೇಗಿದೆ

Sampriya
ಬುಧವಾರ, 12 ಮಾರ್ಚ್ 2025 (15:39 IST)
Photo Courtesy X
ನವದೆಹಲಿ: ಹೃದಯ ಸಂಬಂಧ ಕಾಯಿಲೆ ಸಂಬಂಧ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ಉಪರಾಷ್ಟ್ರಪತಿ ಜಗದೀಪ್ ಧಂಕರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.

ಮಾರ್ಚ್‌ 9ರಂದು ಹೃದಯ ಸಂಬಂಧ ಖಾಯಿಲೆ ಹಿನ್ನೆಲೆ ಅವರನ್ನು  ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿತ್ತು. ಏಮ್ಸ್‌ನಲ್ಲಿ ವೈದ್ಯಕೀಯ ತಂಡದಿಂದ ಅಗತ್ಯ ಆರೈಕೆ ಪಡೆದು ಚೇತರಿಸಿಕೊಂಡ ನಂತರ ಮಾರ್ಚ್‌ 12ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.

X ನಲ್ಲಿನ ಪೋಸ್ಟ್‌ನಲ್ಲಿ, ಉಪರಾಷ್ಟ್ರಪತಿ ಧಂಕರ್ ಅವರು AIIMS ನ ವೈದ್ಯಕೀಯ ತಂಡಕ್ಕೆ ಧನ್ಯವಾದ ಅರ್ಪಿಸಿದರು.

"ಮಾರ್ಚ್ 9 ರಂದು ನನ್ನ ದಾಖಲಾತಿಯಿಂದ ಮಾರ್ಚ್ 12 ರಂದು ಬಿಡುಗಡೆಯಾಗುವವರೆಗೆ ನವದೆಹಲಿಯ ಏಮ್ಸ್‌ನಲ್ಲಿ ವೈದ್ಯಕೀಯ ತಂಡದ ಅನುಕರಣೀಯ ಆರೈಕೆ ಮತ್ತು ವೃತ್ತಿಪರತೆಯನ್ನು ಆಳವಾಗಿ ಶ್ಲಾಘಿಸುತ್ತೇನೆ. ಅವರ ಸಮರ್ಪಣೆ ಮತ್ತು ನಿಖರವಾದ ಗಮನವು ಸುಗಮ ಚೇತರಿಕೆಯನ್ನು ಖಚಿತಪಡಿಸಿತು" ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments