Select Your Language

Notifications

webdunia
webdunia
webdunia
webdunia

ವಿಕ್ರಾಂತ್​ ರೋಣ' ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್

ವಿಕ್ರಾಂತ್​ ರೋಣ' ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್
bangalore , ಸೋಮವಾರ, 25 ಜುಲೈ 2022 (15:22 IST)
ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. 'ವಿಕ್ರಾಂತ್​ ರೋಣ' ಚಿತ್ರದ ಬಿಡುಗಡೆ ಪ್ರಯುಕ್ತ ಅವರಿಬ್ಬರ ವಿಶೇಷ ಕಟೌಟ್​ ತಯಾರಾಗುತ್ತಿದೆ.
ನಟ ಪುನೀತ್​ ರಾಜ್​ಕುಮಾರ್ ಅವರು ಚಿತ್ರರಂಗದ ಎಲ್ಲರ ಜೊತೆಗೆ ಉತ್ತಮ ಒಡನಾಟ ಹೊಂದಿದ್ದರು.
 
 
ಅವರು ಗೌರವದಿಂದ ಕಾಣುತ್ತಿದ್ದರು. ಹಿರಿಯರು-ಕಿರಿಯರು ಎಂಬ ಭೇದ ತೋರದೇ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದರು. ಆ ಕಾರಣಕ್ಕಾಗಿ ಅಪ್ಪು ಎಂದರೆ ಎಲ್ಲರಿಗೂ ಸಖತ್​ ಅಭಿಮಾನ. ಇಂದು ಭೌತಿಕವಾಗಿ ಅವರು ನಮ್ಮ ಜೊತೆ ಇಲ್ಲ. ಆದರೆ ಹಲವು ವಿಚಾರಗಳ ಮೂಲಕ ಮತ್ತೆ ಮತ್ತೆ ನೆನಪಾಗುತ್ತಾರೆ.
 
ಕಿಚ್ಚ ಸುದೀಪ್​ ಮತ್ತು ಪುನೀತ್​ ರಾಜ್​ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. ಬಾಲ್ಯದಿಂದಲೂ ಅವರು ಪರಿಚಿತರು. ವೇದಿಕೆ ಕಾರ್ಯಕ್ರಮವೊಂದರಲ್ಲಿ ಇಬ್ಬರು ಜೊತೆಯಾಗಿ ಪೋಸ್​ ನೀಡಿದ ಈ ಫೋಟೋಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದೇ ಫೋಟೋ ಈಗ ಕಟೌಟ್​ ರೂಪದಲ್ಲಿ ಸಿದ್ಧವಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ಸ್ನೇಹವನ್ನು ಸಾರುವ ಈ ಕಟೌಟ್​ಗಳನ್ನು ಚಿತ್ರಮಂದಿರಗಳ ಮುಂದೆ ನಿಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
 
'ವಿಕ್ರಾಂತ್​ ರೋಣ' ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. 'ರಂಗಿತರಂಗ' ಖ್ಯಾತಿಯ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಜಾಕ್​ ಮಂಜು ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್​ ಮತ್ತು ಹಾಡುಗಳಿಂದಾಗಿ ಸಿನಿಮಾ ಮೇಲಿನ ಕ್ರೇಜ್​ ಹೆಚ್ಚಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಆಂಧ್ರ ಉತ್ಸವದಲ್ಲಿ ಅಪ್ಪು ಕಟೌಟ್ ...!!!!