ಬಂಗಾಳದಲ್ಲಿ ಮತ್ತೆ ಹಿಂಸಾಚಾರ!

Webdunia
ಸೋಮವಾರ, 13 ಜೂನ್ 2022 (13:09 IST)
ಕೋಲ್ಕತಾ : ಪ್ರವಾದಿ ಮೊಹಮ್ಮದ್ ವಿರುದ್ಧ ಹೇಳಿಕೆ ಸಂಬಂಧ ಭಾನುವಾರವೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದಿದೆ.

ನಾಡಿಯಾ ಜಿಲ್ಲೆಯ ಬೇಥುಅಡಹರಿ ನಗರದ ರೈಲ್ವೆ ನಿಲ್ದಾಣದ ಮೇಲೆ ಉದ್ರಿಕ್ತರ ಗುಂಪು ದಾಳಿ ನಡೆಸಿದೆ. ಈ ವೇಳೆ ನಿಲ್ದಾಣ ಮತ್ತು ರೈಲೊಂದಕ್ಕೆ ಬೆಂಕಿ ಹಚ್ಚುವ ಯತ್ನ ನಡೆದಿದೆ. ಅಲ್ಲದೆ ಕಲ್ಲು ತೂರಾಟವನ್ನೂ ನಡೆಸಲಾಗಿದೆ. ಘಟನೆಯಲ್ಲಿ ಆಸ್ತಿಪಾಸ್ತಿಗೆ ಹಾನಿಯುಂಟಾಗಿದೆ.

ಈ ನಡುವೆ ಕಳೆದ 2 ದಿನಗಳಿಂದ ಭಾರೀ ಹಿಂಸಾಚಾರ ನಡೆದಿದ್ದ ಹೌರಾದಲ್ಲಿ ಭಾನುವಾರ ಶಾಂತಿ ನೆಲೆಸಿದೆ. ಗಲಭೆಯ ಕಾರಣದಿಂದಾಗಿ ಹೇರಲಾಗಿದ್ದ ಸೆಕ್ಷನ್ 144 ಸಿಆರ್ಪಿಸಿ ಹಾಗೂ ಇಂಟರ್ನೆಟ್ ಸ್ಥಗಿತ ಮುಂದುವರೆಸಿದ ಹಿನ್ನೆಲೆಯಲ್ಲಿ ಮುರ್ಷಿದಾಬಾದ್, ಬೆಲ್ದಂಗಾ, ರೇಜಿನಗರ, ಶಕ್ತಿಪುರ ಠಾಣೆ ವ್ಯಾಪ್ತಿಯ ಪ್ರದೇಶಗಳಲ್ಲೂ ಶಾಂತಿ ನೆಲೆಸಿದೆ.

ಕಳೆದ 2 ದಿನಗಳ ಕಾಲ ನಡೆದ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಸುಮಾರು 100ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಶಾಂತಿ ವಾತಾವರಣದ ನಡುವೆಯೂ ಮತ್ತೆ ದಂಗೆ ಶುರುವಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅಲರ್ಚ್ ಘೋಷಿಸಲಾಗಿದ್ದು, ಭಾರೀ ಸಂಖ್ಯೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಹೈಅಲರ್ಟ್

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಮುಂದಿನ ಸುದ್ದಿ
Show comments