ಇಂಫಾಲ: ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಬಂಧನ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಹಲವೆಡೆ ಕರ್ಫ್ಯೂ ಜಾರಿ ವಿಧಿಸಲಾಗಿದೆ. ರಾತ್ರೋರಾತ್ರಿ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತಗೊಳಿಲಾಲಾಗಿದೆ.
ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಬಂಧಿಸಿದೆ. ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಹಿಂಸಾಚಾರ ಹಿನ್ನೆಲೆಯಲ್ಲಿ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್ ಮತ್ತು ಕಕ್ಚಿಂಗ್ನಂತಹ ಇತರ ಜಿಲ್ಲೆಗಳಲ್ಲಿಯೂ ಕರ್ಫ್ಯೂ ಜಾರಿ ಮಾಡಲಾಗಿದೆ, ಬಿಷ್ಣುಪುರ ಜಿಲ್ಲೆಯಲ್ಲೂ ಕರ್ಫ್ಯೂ ವಿಧಿಸಲಾಗಿದೆ. ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಪ್ರತಿಭಟನಾಕಾರರು ಮೈತೆಯಿ ಸ್ವಯಂಸೇವಕ ಗುಂಪು ಅರಾಂಬೈ ಟೆಂಗೋಲ್ಗೆ ಸೇರಿದವರಾಗಿದ್ದರು. ಇವರು ತಮ್ಮ ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದು, ರಸ್ತೆಗಳಲ್ಲಿ ಟೈರ್ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಇದೇ ಗುಂಪು ಹಿಂದಿನ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಕುಕಿ ಗ್ರಾಮಗಳ ಮೇಲೆ ದಾಳಿ ಮಾಡಿದ ಆರೋಪವನ್ನು ಕೂಡ ಹೊಂದಿದೆ.