Webdunia - Bharat's app for daily news and videos

Install App

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Sampriya
ಭಾನುವಾರ, 8 ಜೂನ್ 2025 (10:27 IST)
Photo Courtesy X
ಇಂಫಾಲ: ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಬಂಧನ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಹಲವೆಡೆ ಕರ್ಫ್ಯೂ ಜಾರಿ ವಿಧಿಸಲಾಗಿದೆ. ರಾತ್ರೋರಾತ್ರಿ ಎಲ್ಲಾ ಜಿಲ್ಲೆಗಳಲ್ಲಿ ಇಂಟರ್ನೆಟ್​​ ಸ್ಥಗಿತಗೊಳಿಲಾಲಾಗಿದೆ. 

ಮೈತೆಯಿ ಸಂಘಟನೆಯ ನಾಯಕ ಅರಾಂಬೈ ಟೆಂಗೋಲ್ ಅವರನ್ನು ಭದ್ರತಾ ಪಡೆಗಳು ಮಣಿಪುರದ ಇಂಫಾಲ್ ಪಶ್ಚಿಮದ ಕ್ವಾಕೆಟಾಲ್ ಪ್ರದೇಶದಲ್ಲಿ ಬಂಧಿಸಿದೆ. ಇದು ಅವರ ಬೆಂಬಲಿಗರನ್ನು ಕೆರಳಿಸಿದೆ. ಇದರ ಬೆನ್ನಲ್ಲೇ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಹಿಂಸಾಚಾರ ಹಿನ್ನೆಲೆಯಲ್ಲಿ ಇಂಫಾಲ್ ಪೂರ್ವ, ಇಂಫಾಲ್ ಪಶ್ಚಿಮ, ತೌಬಲ್ ಮತ್ತು ಕಕ್ಚಿಂಗ್‌ನಂತಹ ಇತರ ಜಿಲ್ಲೆಗಳಲ್ಲಿಯೂ ಕರ್ಫ್ಯೂ ಜಾರಿ ಮಾಡಲಾಗಿದೆ, ಬಿಷ್ಣುಪುರ ಜಿಲ್ಲೆಯಲ್ಲೂ ಕರ್ಫ್ಯೂ ವಿಧಿಸಲಾಗಿದೆ. ಪೊಲೀಸರು ಹಲವು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಪ್ರತಿಭಟನಾಕಾರರು ಮೈತೆಯಿ ಸ್ವಯಂಸೇವಕ ಗುಂಪು ಅರಾಂಬೈ ಟೆಂಗೋಲ್‌ಗೆ ಸೇರಿದವರಾಗಿದ್ದರು. ಇವರು ತಮ್ಮ ನಾಯಕನ ಬಿಡುಗಡೆಗೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದ್ದು, ರಸ್ತೆಗಳಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಇದೇ ಗುಂಪು ಹಿಂದಿನ ಜನಾಂಗೀಯ ಹಿಂಸಾಚಾರದ ಸಮಯದಲ್ಲಿ ಕುಕಿ ಗ್ರಾಮಗಳ ಮೇಲೆ ದಾಳಿ ಮಾಡಿದ ಆರೋಪವನ್ನು ಕೂಡ ಹೊಂದಿದೆ.

 

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments