Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಹಿಂಸಾಚಾರ: ತನಿಖಾ ಸಮಿತಿ ಸೇರಲು ಕಾಂಗ್ರೆಸ್ ತಿರಸ್ಕಾರ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (14:27 IST)
ನವದೆಹಲಿ :  ಆಗಸ್ಟ್ 11 ರಂದು ಮುಂಗಾರು ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಸಂಭವಿಸಿದ್ದ ಹಿಂಸಾಚಾರ ಘಟನೆ ಕುರಿತ ತನಿಖೆಗೆ ಉದ್ದೇಶಿಸಲಾಗಿರುವ ತನಿಖಾ ಸಮಿತಿಯ ಭಾಗವಾಗಲು ಕಾಂಗ್ರೆಸ್ ತಿರಸ್ಕರಿಸಿದೆ.

ಈ ಸಂಬಂಧ ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದು, ಆಗಸ್ಟ್ 11, 2021 ರ ಘಟನೆಗಳ ಕುರಿತು ತನಿಖಾ ಸಮಿತಿ ರಚಿಸುವುದು, ಸಂಸದರನ್ನು ಬೆದರಿಸಲು ಮೌನವಾಗಿ ವಿನ್ಯಾಸಗೊಳಿಸಿದಂತೆ ತೋರುತ್ತದೆ. ಇದು ಜನಪ್ರತಿನಿಧಿಗಳ ಧ್ವನಿಯನ್ನು ನಿಗ್ರಹಿಸುವುದಲ್ಲದೆ ಸರ್ಕಾರಕ್ಕೆ ಅನಾನುಕೂಲವಾಗಿರುವ ಎಲ್ಲವನ್ನು ಉದ್ದೇಶಪೂರ್ವಕವಾಗಿ ದೂರವಿಡುತ್ತದೆ ಎಂದು ಹೇಳಿದ್ದಾರೆ.
ಆದ್ದರಿಂದ, ನಾನು ನಿಸ್ಸಂದಿಗ್ಧವಾಗಿ ವಿಚಾರಣಾ ಸಮಿತಿ ರಚನೆಯನ್ನು ವಿರೋಧಿಸುತ್ತೇವೆ ಮತ್ತು ಈ ಸಮಿತಿಯ ನಾಮ ನಿರ್ದೇಶನಕ್ಕಾಗಿ ಪಕ್ಷದಿಂದ ಸದಸ್ಯರ ಹೆಸರನ್ನು ಪ್ರಸ್ತಾಪಿಸುವ ಪ್ರಶ್ನೆಯು ಉದ್ಭವಿಸುವುದಿಲ್ಲ ಎಂದು ಅವರು ತಿಳಿಸಿದರು.
ಚರ್ಚೆಯಲ್ಲಿ ಪಾಲ್ಗೊಳ್ಳಲು ಪ್ರತಿಪಕ್ಷ ಕಾಂಗ್ರೆಸ್ ಉತ್ಸುಕವಾಗಿದೆ ಮತ್ತ ಅಧಿವೇಶನವನ್ನು ಸುಗಮವಾಗಿ ನಡೆಸಿಕೊಂಡು ಹೋಗುವಲ್ಲಿ ಸರ್ಕಾರವೇ ಅಡ್ಡಿಯಾಗಿದೆ. ದೇಶದ ಆರ್ಥಿಕತೆ, ರೈತರ ಪ್ರತಿಭಟನೆ, ಹಣದುಬ್ಬರ, ತೈಲ ಬೆಳೆ ಏರಿಕೆ,ನಿರುದ್ಯೋಗ
ಮತ್ತಿತರ ಅನೇಕ ವಿಷಯಗಳ ಕುರಿತ ಚರ್ಚೆಗೆ ಕಾಂಗ್ರೆಸ್ ನೋಟಿಸ್ ನೀಡಿದರೂ, ತಮ್ಮ ಬೇಡಿಕೆಯನ್ನು ಸರ್ಕಾರ ಪರಿಗಣಿಸಲೇ ಇಲ್ಲ. ಚರ್ಚೆ ಇಲ್ಲದೇ ಅನೇಕ ಬಿಲ್ ಗಳು, ನೀತಿಗಳನ್ನು ಅಂಗೀಕರಿಸಲಾಗಿದೆ ಎಂದು ಖರ್ಗೆ ಪತ್ರದಲ್ಲಿ ಹೇಳಿದ್ದಾರೆ. ಈ ಸಂಬಂಧ ಇತರ ಪ್ರತಿಪಕ್ಷಗಳ ಜೊತೆಗೆ ಮಾತನಾಡಿದ್ದು, ಬಹುತೇಕ ಎಲ್ಲಾ ಪಕ್ಷಗಳು ಉದ್ದೇಶಿಕಿ ತನಿಖಾ ಸಮಿತಿ ರಚನೆಯನ್ನು ತಿರಸ್ಕರಿಸಿವೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments