Webdunia - Bharat's app for daily news and videos

Install App

ಹಿಂಸಾಚಾರ : ಪ.ಬಂಗಾಳ ಬದುಕಲು ಯೋಗ್ಯವಾಗಿಲ್ಲ !

Webdunia
ಶನಿವಾರ, 26 ಮಾರ್ಚ್ 2022 (07:39 IST)
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಕೆಲದಿನಗಳ ಹಿಂದೆ ನಡೆದ ಹಿಂಸಾಚಾರ ಪ್ರಕರಣ ರಾಜ್ಯ ಸಭೆಯಲ್ಲಿ ಪ್ರತಿಧ್ವನಿಸಿದೆ.

ಪಶ್ಚಿಮ ಬಂಗಾಳ ರಾಜ್ಯ ಬದುಕಲು ಯೋಗ್ಯವಾಗಿಲ್ಲ. ಇದೊಂದು ಸಾಮೂಹಿಕ ಹತ್ಯಾ ಪ್ರಕರಣ ಎಂದು ಬಿಜೆಪಿ ಸಂಸದೆ ರೂಪಾ ಗಂಗೂಲಿ ಕಣ್ಣೀರಿಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯಲ್ಲಿ ಇಬ್ಬರು ಮಕ್ಕಳು ಮತ್ತು ಆರು ಮಂದಿ ಮಹಿಳೆಯರನ್ನು ಜೀವಂತ ಸುಟ್ಟ ಘಟನೆ ಕೆಲದಿನಗಳ ಹಿಂದೆ ನಡೆದಿತ್ತು.

ಈ ಬಗ್ಗೆ ರಾಜ್ಯಸಭೆಯಲ್ಲಿ ಮಾತನಾಡಿದ ರೂಪಾ ಗಂಗೂಲಿ, ಪಶ್ಚಿಮ ಬಂಗಾಳ ರಾಜ್ಯವು ಬದುಕಲು ಯೋಗ್ಯವಾಗಿಲ್ಲ. ಪಶ್ಚಿಮ ಬಂಗಾಳದಲ್ಲಿ ಜನರು ಸರ್ಕಾರದ ವಿರುದ್ಧ ಮಾತನಾಡುವ ಹಾಗೆ ಇಲ್ಲ.

ಸರ್ಕಾರವು ಕೊಲೆಗಡುಕರನ್ನು ರಕ್ಷಿಸುತ್ತಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ಸರ್ಕಾರವೊಂದು ಜನರನ್ನು ಸಾಯಿಸುವಂತಹ ಪರಿಸ್ಥಿತಿ ಪಶ್ಚಿಮ ಬಂಗಾಳದಲ್ಲಿ ಹೊರತು ಪಡಿಸಿ ಬೇರೆ ಯಾವುದೇ ರಾಜ್ಯದಲ್ಲಿ ಇಲ್ಲ. ನಾವೆಲ್ಲರೂ ಮನುಷ್ಯ ಜೀವಿಗಳು. ನಾವು ಕಲ್ಲು ಹೃದಯದ ರಾಜಕಾರಣ ಮಾಡಲು ಸಾಧ್ಯವಿಲ್ಲ. ಅಲ್ಲಿ ಸಾಮೂಹಿಕ ಹತ್ಯೆಗಳು ನಡೆಯುತ್ತಿವೆ.

ಅಲ್ಲಿನ ಜನರು ಊರುಗಳಿಂದ ಪರಾರಿಯಾಗುತ್ತಿದ್ದಾರೆ. ಕೂಡಲೇ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಮನವಿ ಮಾಡಿಕೊಂಡು ಭಾವುಕರಾದರು. ಸಂಸದೆಯ ಈ ಹೇಳಿಕೆಯಿಂದ ರಾಜ್ಯಸಭೆಯಲ್ಲಿ ಕೆಲಕಾಲ ಗದ್ದಲ ಉಂಟಾಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments